“ಬಾಗಿನ” ವಾಚಿಸಿ ದಸರಾ ಉದ್ಘಾಟನೆಗೆ ಮೆರಗು ತಂದ ಬಾನು ಮುಷ್ತಾಕ್.

ಮೈಸೂರು,ಸೆಪ್ಟಂಬರ್,22,2025 (www.justkannada.in): ಮೈಸೂರು ದಸರಾ ಉದ್ಘಾಟನೆ ಇದು ಜೀವನದ ಅತ್ಯಂತ ಗೌರವದ ಸಂಗತಿ ಇದು ನಾಡಿನ ಸಂಸ್ಕೃತಿಯ ಉತ್ಸವ ಹಾಗೂ ಸಮನ್ವಯದ ಮೇಳ ದಸರಾ ಕೇವಲ ಮೈಸೂರು ನಾಡು, ದೇಶಕ್ಕೆ ಮಾತ್ರ ಸೀಮಿತವಾಗಬಾರದು ಇಡೀ ಪ್ರಪಂಚದಾದ್ಯಂತ ನೆಲೆ ಕಂಡುಕೊಳ್ಳಲಿ ಎಂದು ಸಾಹಿತಿ ಬಾನು ಮುಷ್ತಾಕ್ ನುಡಿದರು.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿ ಮಾತನಾಡಿದ ಸಾಹಿತಿ ಬಾನು ಮುಷ್ತಾಕ್ ಅವರು, ದಸರಾ ಉತ್ಸವದ ಉದ್ಘಾಟನೆಯನ್ನು ತಾಯಿ ಚಾಮುಂಡೇಶ್ವರಿಯ ಕೃಪಾಶೀರ್ವಾದದಿಂದ ಉದ್ಘಾಟನೆ ಮಾಡಿದ್ದೇವೆ. ನನ್ನ ಆಪ್ತ ಗೆಳತಿ ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದರು. ಆದರೆ ತಾಯಿ ಚಾಮುಂಡೇಶ್ವರಿ ನನ್ನ ಈ ರೀತಿ ಕರೆಸಿಕೊಳ್ಳುತ್ತಿದ್ದಾಳೆ. ಒಂದಷ್ಟು ವಿರೋಧಗಳು ವ್ಯಕ್ತವಾದರೂ ನನ್ನನ್ನ ತಾಯಿ ಕರೆಸಿಕೊಂಡಿದ್ದಾಳೆ ಚಾಮುಂಡಿ ತಾಯಿಯ ಕೃಪೆಯ ನೆರಳಿನಲ್ಲಿ ನಾನು ನಿಮ್ಮೆದುರು ನಿಂತಿದ್ದೇನೆ. ಇದು ಜೀವನದ ಅತ್ಯಂತ ಗೌರವದ ಸಂಗತಿ. ಇದು ನಾಡಿನ ಸಂಸ್ಕೃತಿಯ ಉತ್ಸವ ಹಾಗೂ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ್ದ ಪ್ರತಿಯೊಬ್ಬರಿಗೂ ಇದರ ಅರ್ಹತೆ ಇದೆ ಎಂದರು.

ಎಲ್ಲರನ್ನು ಒಳಗೊಂಡು ಆಚರಿಸುವ ಹಬ್ಬ ಇದು. ನನ್ನ ಆಪ್ತ ಸಂಬಂಧಿಯೊಬ್ಬರು ನನಗೆ ಅವರು ಮಾವ ಆಗಬೇಕು. ಅವರು ಇಲ್ಲೇ ಬೆಳಗೊಳದಲ್ಲಿ ಇದ್ದರು. ಮಹಾರಾಜರ ಅಂಗರಕ್ಷಣೆಯ ತಂಡದಲ್ಲಿ ಸೈನಿಕರಾಗಿದ್ದರು. ಮಹಾರಾಜರು ಜಯಚಾಮರಾಜೇಂದ್ರ ಒಡೆಯರ್ ಮುಸ್ಲಿಂ ಅವರನ್ನು ನಂಬಿದರು. ಅವರ ಅಂಗಪಡೆಯ ಸದಸ್ಯರನ್ನಾಗಿ ಮಾಡಿಕೊಂಡಿದ್ದರು. ನನ್ನ ಧಾರ್ಮಿಕ ನಂಬಿಕೆಗಳು ಮಾನವೀಯ ದರ್ಶನಗಳನ್ನು ಕಲಿಸಿದೆ. ಎಲ್ಲರನ್ನು ಗೌರವವಿಸುದನ್ನು ಕಳಿಸಿದೆ. ಇದು ಸರ್ವಜನಾಂಗದ ಶಾಂತಿಯ ತೋಟ . ನಾವು ಎಲ್ಲರನ್ನೂ ಗೌರವಿಸೋಣ. ಈ ನೆಲದ ಹೂವುಗಳು ಐಕ್ಯತೆಯಿಂದ ಕೂಡಿರಲಿ. ನಮ್ಮೊಳಗಿನ ದ್ವೇಷ ಅಸಹಿಷ್ಣತೆ ಎಲ್ಲವನ್ನೂ ಹೋಗಿಸಲಿ. ಇಡೀ ಜಗತ್ತಿನ ಮಾನವನ ಕುಲಕ್ಕೆ ಶಾಂತಿ ಸಹನೆ ನ್ಯಾಯದ ದೀಪ ಬೆಳಗಿಸಲಿ. ಇಲ್ಲಿ ಬೇಳಗಿದ ದೀಪ ಜಗತ್ತನ್ನು ಬೆಳಗಲಿ ಎಂದು ಹೇಳಿದರು.

ವಿರೋಧ ಮಾಡಿದವರಿಗೆ ಭಾಷಣದ ಮೂಲಕ ಟಾಂಗ್ ಕೊಟ್ಟ ಬಾನುಮುಷ್ತಾಕ್

ಈ ನೆಲದ ಪರಂಪರೆ ಇದು ಸರ್ವಜನಾಂಗದ ಶಾಂತಿಯ ತೋಟದ ಅಂತ ಹೇಳುತ್ತೆ. ಪ್ರತಿ ಹೂ ತನ್ನ ತೋಟದಲ್ಲಿ ಅರಳಲಿ. ಒಟ್ಟಿಗೆ ಸೇರಿದಾಗ ಎಲ್ಲರೂ ಒಂದಾಗಲಿ. ನಾವೆಲ್ಲರೂ ಒಂದೇ ಗಗನದ ಪಯಣಿಕರು. ಭೂಮಿ ಯಾರನ್ನು ಹೊರ ತಳ್ಳಲ್ಲ. ಮನುಷ್ಯ ಮಾತ್ರ ಗಡಿ ಹಾಕುತ್ತಾನೆ. ಇದನ್ನು ನಾವೇ ಅಳಿಸಬೇಕು. ಆಸ್ತಗಳಿಂದಲ್ಲ ಅಕ್ಷರಗಳಿಂದ ನಾವು ಗೆಲ್ಲಬೇಕು ಎಂದು ವಿರೋಧ ಮಾಡಿದವರಿಗೆ ಭಾಷಣದ ಮೂಲಕ ಬಾನುಮುಷ್ತಾಕ್ ಟಾಂಗ್ ಕೊಟ್ಟರು

ಕೃಷ್ಣರಾಜ ಒಡೆಯರ್ ಸಾಮಾಜಿಕ ನ್ಯಾಯದ ದೊರೆ ಆಗಿದ್ದರು. ಭೇದ ಭಾವ ತೋರಲಿಲ್ಲ. ಶಕ್ತಿಯನ್ನು ಹಂಚಿಕೊಂಡರೆ ಧೀರ್ಘ ಕಾಲ ಉಳಿಯುತ್ತೆ ಅಂತ ಹೇಳಿದರು ಎಂದರು.

ನಾನು ಒಬ್ಬ ಸಾಹಿತಿ ಲೇಖಕಿ. ಸಾಹಿತ್ಯದ ಮೂಲಕ ಸಂದೇಶ ಸಾರುತ್ತೇನೆ. 10 ವರ್ಷದ ಹಿಂದೆ ಬರೆದಿದ್ದ ಪ್ರಕಟಣೆ ಆಗಿದೆಬಾಗಿನ ಅಂತ ಅದರ ಹೆಸರು. ಪ್ರೀತಿಯ ಸಮಾಜದ ಕಟ್ಟೋಣ ಎಲ್ಲರಿಗೂ ಸಮಪಾಲು ಸಮಬಾಳು ಇರಲಿ. ನಾನು ನೂರಾರು ದೀಪಗಳನ್ನು ಬೆಳಗಿದ್ದೇನೆ. ಪುಷ್ಪಾರ್ಚನೆ ಮಾಡಿದೇವೆ. ಮಂಗಳಾರತಿ ಸ್ವೀಕರಿಸಿದ್ದೇವೆ. ನನ್ನ ಹಿಂದೂ ಧರ್ಮದ ಸಂಬಂಧ ನನ್ನ ಆತ್ಮಕಥೆಯಲ್ಲಿ ಬರೆದಿದ್ದೇನೆ. ಅದು ನಾಳೆ ಪ್ರಕಟ ಆಗತ್ತೆ. ಎಷ್ಟೇ ಸವಾಲು ಬಂದರೂ ದಿಟ್ಟವಾಗಿ ನನ್ನನ್ನು ಆಹ್ವಾನ ನೀಡಿ ನೈತಿಕ ಬೆಂಬಲ ನೀಡಿದ ಸಿಎಂ ಜಿಲ್ಲಾಡಳಿತಕ್ಕೆ ನನ್ನ ಧನ್ಯವಾದಗಳು  ಎಂದು  ಬಾನು ಮುಸ್ತಾಕ್ ತಿಳಿಸಿದರು.

Key words: Banu Mushtaq, Mysore dasara, inauguration , Bagina