ಬೆಂಗಳೂರು,ಜೂನ್,13,2026 (www.justkannada.in): ಬಿಡದಿಯ ಟೌನ್ ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸಿದ ಬೆನ್ನಲ್ಲೆ ಈ ಬಗ್ಗೆ ಟೀಕಿಸಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಡಿ.ಕೆ ಸುರೇಶ್ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಮಾತನಾಡಿರುವ ಡಿ.ಕೆ ಸುರೇಶ್, ಬಿಡದಿ ಟೌನ್ ಶೀಪ್ ಯೋಜನೆಯು ಕುಮಾರಸ್ವಾಮಿ ಅವರದ್ದೇ. ಅವರೇ ಯೋಜನೆ ತರಲು ಮುಂದಾಗಿದ್ದರು ಎಂದು ಹೇಳಿದ್ದಾರೆ.
ಬಿಡದಿ ಟೌನ್ ಶಿಪ್ ಯೋಜನೆ ವಿರುದ್ದ ರೈತರ ಧರಣಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ಜಮೀನು ನೀಡಿದ ರೈತರಿಗೆ ಕಡಿಮೆ ಪರಿಹಾರ ನೀಡುತ್ತಿಲ್ಲ. ರೈತರಿಗೆ ಸರ್ಕಾರ ಸೂಕ್ತ ಸಮರ್ಪಕ ಪರಿಹಾರ ನೀಡುತ್ತಿದೆ. ಕಾನೂನುಬದ್ದವಾದ ಪರಿಹಾರವನ್ನೇ ರೈತರಿಗೆ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
Key words: Bidadi, Town Sheep, Project ,HD Kumaraswamy, DK Suresh







