Friday, September 11, 2026

BDA Apartments

Home Crime ಮಾದಪ್ಪನ ದರ್ಶನ ಪಡೆದು ವಾಪಸ್ಸಾಗುವಾಗ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

ಮಾದಪ್ಪನ ದರ್ಶನ ಪಡೆದು ವಾಪಸ್ಸಾಗುವಾಗ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

ಚಾಮರಾಜನಗರ,ಜನವರಿ,23,2026 (www.justkannada.in):  ಮಲೇ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಲಾರಿ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ನಡೆದಿದೆ.

ಹನೂರು ಪಟ್ಟಣದ ಅಗ್ನಿಶಾಮಕದಳ ಠಾಣೆ ಬಳಿ ಈ ದುರ್ಘಟನೆ ನಡೆದಿದೆ.  ಗಣೇಶ್(30) ಮೃತಪಟ್ಟ ಬೈಕ್ ಸವಾರ, ನಾಗರಾಜ್ ಎಂಬುವವರಿಗೆ ಗಾಯಗಳಾಗಿದ್ದು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಣೇಶ್ ಮತ್ತು ನಾಗರಾಜ್ ಬೆಂಗಳೂರಿನ ಲಗ್ಗೆರೆ ನಿವಾಸಿಗಳಾಗಿದ್ದು ಬೈಕ್ ನಲ್ಲಿ ಮಲೇ ಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಸ್ ಆಗುತ್ತಿದ್ದರು. ಈ ವೇಳೆ ಲಾರಿ ಬೈಕ್ ಗೆ ಡಿಕ್ಕಿಯಾಗಿ ಈ ಘಟನೆ ನಡೆದಿದೆ. ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Biker, death, hit-and-run, Chamaraj nagar