ಬೆಂಗಳೂರು, ಮೇ 27, 2025 (www.justkannada.in): ಕರ್ನಾಟಕ ರಾಜ್ಯದ ಶಿಕ್ಷಣ ವ್ಯವಸ್ಥೆಯ ರಾಜ್ಯ ಪಠ್ಯಕ್ರಮದಲ್ಲಿ ಕನ್ನಡ ಮಕ್ಕಳಿಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಮಾತ್ರ ಒಳಗೊಂಡ ‘ದ್ವಿಭಾಷಾ ನೀತಿ’ (Two-Language Policy) ಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ, ‘ನಮ್ಮ ನಾಡು ನಮ್ಮ ಆಳ್ವಿಕೆ’ ಸಂಘಟನೆಯು ಬೃಹತ್ ಆನ್ಲೈನ್ ಅಭಿಯಾನಕ್ಕೆ ಚಾಲನೆ ನೀಡಿದೆ.
ಪ್ರಸ್ತುತ ಇರುವ ತ್ರಿಭಾಷಾ ನೀತಿಯನ್ನು ನಿಲ್ಲಿಸಿ, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಿಗೆ ಮಾತ್ರ ಪ್ರಾಮುಖ್ಯತೆ ನೀಡಬೇಕು ಎಂಬುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಈ ಅಭಿಯಾನದ ಭಾಗವಾಗಿ, ಸಾಮಾಜಿಕ ಮಾಧ್ಯಮವಾದ X (ಹಿಂದೆ ಟ್ವಿಟರ್) ನಲ್ಲಿ ‘ಸ್ಪೇಸ್’ ಮೂಲಕ ಆನ್ಲೈನ್ ಪಿಟಿಷನ್ಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.
ಖ್ಯಾತ ಚಲನಚಿತ್ರ ನಿರ್ದೇಶಕ ಟಿ.ಎಸ್ ನಾಗಾಭರಣ ಅವರು ಆನ್ಲೈನ್ ಪಿಟಿಷನ್ ಗೆ ಮೊದಲ ಸಹಿ ಹಾಕಿ ಈ ಮಹತ್ವದ ಅಭಿಯಾನಕ್ಕೆ ತಮ್ಮ ಬೆಂಬಲ ಸೂಚಿಸಿದರು.
‘ನಮ್ಮ ನಾಡು ನಮ್ಮ ಆಳ್ವಿಕೆ’ ಸಂಘಟನೆಯು ಈ ಅಭಿಯಾನದ ಮೂಲಕ, ಕರ್ನಾಟಕದ ರಾಜ್ಯ ಪಠ್ಯಕ್ರಮದಲ್ಲಿ ಸಮತೋಲಿತ ಭಾಷಾ ನೀತಿಯ ಅವಶ್ಯಕತೆಯನ್ನು ಎತ್ತಿ ಹಿಡಿಯಲು ಪ್ರಯತ್ನಿಸುತ್ತಿದೆ ಎಂದು ಟಿ.ಎಸ್ ನಾಗಾಭರಣ ತಿಳಿಸಿದ್ದಾರೆ.
Key words: online campaignm launched, ‘bilingual policy, education