ಕಾಮಗಾರಿ ಮುಗಿಸಿದರೂ ಬಾರದ ಬಾಕಿ ಬಿಲ್; ಗುತ್ತಿಗೆದಾರ  ಆತ್ಮಹತ್ಯೆಗೆ ಯತ್ನ.

ಬೆಳಗಾವಿ,ಆಗಸ್ಟ್,19,2023(www.justkannada.in):  ಶಾಲಾ ಕಟ್ಟಡ ಕಾಮಗಾರಿ ಮುಗಿಸಿದರೂ ಬಾಕಿ ಬಿಲ್ ಬಾರದ ಹಿನ್ನಲೆ  ಗುತ್ತಿಗೆದಾರನೋರ್ವ ಅದೇ ಶಾಲಾ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟೆನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬೆಣಚಿನಮರಡಿಯಲ್ಲಿ ಈ ಘಟನೆ ನಡೆದಿದೆ. ಗುತ್ತಿಗೆದಾರ ರಾಮಣ್ಣ ಅಡಿವೆಪ್ಪ ಸರಕಪ್ಪಗೋಳ ಆತ್ಮಹತ್ಯೆಗೆ ಯತ್ನಿಸಿದವರು.

2018ರಲ್ಲಿ ಪ್ರೌಢ ಶಾಲಾ ಕಟ್ಟಡ ಕಾಮಗಾರಿ ಕೈಗೊಂಡಿದ್ದ ರಾಮಣ್ಣ ಅವರು ಎನ್​ಸಿಸಿ ಕಂಪನಿಯಿಂದ ಬಿಲ್ ಬಾಕಿ ಉಳಿಸಿಕೊಂಡಿರುವುದಾಗಿ ಆರೋಪಿಸಿ ಈ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಂತರ ಪೊಲೀಸರು ಬಂದು ರಾಮಣ್ಣ ಅವರ ಮನವೊಲಿಸಿ ಕಟ್ಟಡದಿಂದ ಕೆಳಗಿಳಿಸಿದ್ದಾರೆ ಎನ್ನಲಾಗಿದೆ.

Key words: bill -completion –work-contractor- attempted- suicide.