ಇನ್ನೂ ಬಿಲ್ ಕೊಟ್ಟಿಲ್ಲ, ಆಗಲೇ ಕಮಿಷನ್ ಆರೋಪ- ಬಿಜೆಪಿ ವಿರುದ್ಧ ಸಚಿವ ರಾಮಲಿಂಗರೆಡ್ಡಿ ವಾಗ್ದಾಳಿ.

ಬೆಂಗಳೂರು,ಆಗಸ್ಟ್,10,2023(www.justkannada.in): ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ 15%  ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಇನ್ನೂ ಬಿಲ್ ಕೊಟ್ಟಿಲ್ಲ, ಆಗಲೇ ಕಮಿಷನ್ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿ ತನಿಖೆಗೆ ಸಮಿತಿ ರಚನೆ ಆಗಿದೆ. ತನಿಖಾ ವರದಿ ಬಂದ ಮೇಲೆ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಲಾಗುತ್ತದೆ. ಇನ್ನೂ ಬಿಲ್ ಕೊಟ್ಟಿಲ್ಲ, ಆಗಲೇ ಕಮಿಷನ್ ಆರೋಪ ಮಾಡ್ತಿದ್ದಾರೆ. ಬಿಜೆಪಿಯವರು ನೈತಿಕ ಹಕ್ಕು ಕಳೆದುಕೊಂಡಿದ್ದಾರೆ ಎಂದು ಗುಡುಗಿದರು.

ಗುತ್ತಿಗೆದಾರರ ಹಣ ಬಿಡುಗಡೆ ಮಾಡಬೇಕು ಅಂತಾ ನಾನು ಹೇಳುತ್ತೇನೆ. ಬಿಜೆಪಿ ಮೇಲಿದ್ದ 40 ಪರ್ಸೆಂಟ್​​ ಕಮಿಷನ್ ಆರೋಪ ಸತ್ಯ. ಆದರೆ ಈಗ ಮಾಡುತ್ತಿರುವ 15% ಕಮಿಷನ್ ಆರೋಪ ಸುಳ್ಳು ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

Key words: bill – not – paid – commission-Minister -Ramalingareddy – BJP.