ಯಾರೇ ಸಿಎಂ ಆದ್ರೂ ಕರ್ನಾಟಕ ಅಭಿವೃದ್ದಿಯಾಗಲ್ಲ- ಬಿವೈ ವಿಜಯೇಂದ್ರ

ಕೊಪ್ಪಳ,ಮೇ,28,2026 (www.justkannada.in):  ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಯಾರೇ ಮುಖ್ಯಮಂತ್ರಿಯಾದರೂ ಕರ್ನಾಟಕ ಅಭಿವೃದ್ದಿಯಾಗಲ್ಲ. ಈ ಸರ್ಕಾರದಿಂದ ರಾಜ್ಯ ಸಾಲದ ಸುಳಿಯಲ್ಲಿ ಸಿಲುಕಿದೆ  ಎಂದು ಕಿಡಿಕಾರಿದರು.

ಸಿಎಂ ಯಾರಾ ಆಗುತ್ತಾರೆ ಅನ್ನೋದು ಮುಖ್ಯವಲ್ಲ. ಯಾರೇ ಸಿಎಂ ಆದರೂ ರಾಜ್ಯದಲ್ಲಿ ಅಭಿವೃದ್ದಿ ಆಗಲ್ಲ.  ರಾಜ್ಯದ ಪರಿಸ್ಥಿತಿ ಬಗ್ಗೆ ನಾವು ತಲೆಕೆಡಿಸಿಕೊಂಡಿದ್ದೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: Karnataka, not develop, becomes, CM, BJP,  BY Vijayendra