ಲೋಕಸಭೆ ಚುನಾವಣೆ ನಂತರವೂ ಮೈತ್ರಿ ಮುಂದುವರಿಕೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು.

ತುಮಕೂರು, ಮಾರ್ಚ್, 30,2024 (www.justkannada.in):   ಲೋಕಸಭೆ ಚುನಾವಣೆ  ನಂತರವೂ ಬಿಜೆಪಿ-ಜೆಡಿಎಸ್ ಮೈತ್ರಿ  ಮುಂದುವರಿಯಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಹೆಚ್.ಡಿ ದೇವೇಗೌಡರು, ಚುನಾವಣೆ ಮುಗಿದ  ನಂತರವೂ ಬಿಜೆಪಿ-ಜೆಡಿಎಸ್ ಸಂಬಂಧ ಮುಂದುವರೆಯಲಿದ್ದು,  ಈ ಸಂಬಂಧ ಕಾಪಾಡುಕೊಂಡು‌ ಹೋಗುತ್ತೇವೆ. ನಮ್ಮ ಬಾಂಧವ್ಯ ತಾತ್ಕಾಲಿಕವಲ್ಲ. ಈ ಬಾಂಧವ್ಯವನ್ನ ಮುಂದುವರೆಸಿಕೊಂಡು ಹೋಗುವ ಪ್ರಾಮಾಣಿಕ ಕೆಲಸ ಮಾಡಬೇಕು ಎಂದರು.

ದೇಶದಲ್ಲಿ ಕಾಂಗ್ರೆಸ್ ಹಿನಾಯ ಸ್ಥಿತಿಗೆ ತಲುಪಿದೆ ಎಲ್ಲಿದೆ ಕಾಂಗ್ರೆಸ್..?  ಇಡೀ  ಹಿಂದೂಸ್ತಾನದಲ್ಲಿ 3 ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿದೆ . ರಾಜಸ್ತಾನ್, ಮಧ್ಯ ಪ್ರದೇಶ, ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಇದೆ ಎಂದರು.

Key words: BJP, JDS, HD DeveGowda.