ನೇಹಾ ಕೊಲೆ ಪ್ರಕರಣವನ್ನ ಬಿಜೆಪಿ ರಾಜಕೀಯಕ್ಕೆ ಬಳಕೆ- ಸಿಎಂ ಸಿದ್ದರಾಮಯ್ಯ ಕಿಡಿ.

ಮೈಸೂರು,ಏಪ್ರಿಲ್,20,2024 (www.justkannada.in):  ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣವನ್ನ ಬಿಜೆಪಿಯು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಇದು ದುರ್ದೈವದ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದೆ ತೀವ್ರವಾಗಿ ಖಂಡಿಸುತ್ತೇನ.  ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಬಿಜೆಪಿ ಈ ವಿಚಾರವನ್ನ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ.

ಎಲ್ಲರ ಅಧಿಕಾರವಧಿಯಲ್ಲಿ ಕೊಲೆಗಳಾಗಿದೆ. ಬಿಜೆಪಿ ನಾಯಕರು ಪ್ರತಿಭಟನೆಮಾಡುತ್ತಿದ್ದಾರೆ ಮಾಡಲಿ. ಕಾನೂನು ವಿಚಾರದಲ್ಲಿ ಸುವ್ಯವಸ್ಥೆ ವಿಚಾರದಲ್ಲಿ  ಗಂಭೀರವಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Key words: BJP, Neha, murder case, politics, Siddaramaiah