ಬಿಜೆಪಿಯಲ್ಲೇ ಕಿತ್ತಾಟ: ವಿಪಕ್ಷ ನಾಯಕನ ನೇಮಕ ಮಾಡಲೂ ಆಗುತ್ತಿಲ್ಲ- ಬಿಎಸ್ ವೈಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು.

ಬೆಂಗಳೂರು,ನವೆಂಬರ್,2,2023(www.justkannada.in): ಕಾಂಗ್ರೆಸ್ ನವರು ಕಚ್ಚಾಡ್ತಾರೆ. ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಇಬ್ಬರ ನಡುವಿನ ಗುದ್ದಾಟ ತಾರಕಕ್ಕೇರಿದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಬಿಜೆಪಿಯವರು ಕಿತ್ತಾಡುತ್ತಿದ್ದಾರೆ. ಬಿಜೆಪಿಯವರ ಕಿತ್ತಾಟದಿಂದಲೇ ವಿರೋಧ ಪಕ್ಷದ ನಾಯಕನ ನೇಮಕ ಮಾಡಲೂ ಆಗುತ್ತಿಲ್ಲ. ಅವರದನ್ನು ಮುಚ್ಚಿಕೊಳ್ಳಲು ನಮ್ಮ ಬಗ್ಗೆ ಮಾತಾಡುತ್ತಾರೆ. ನಮ್ಮ ಶಾಸಕರಿಗೆ ಚಾಕಲೇಟ್ ಕೊಡಲು ಬರ್ತಾರೆ ಎಂದು ಲೇವಡಿ ಮಾಡಿದರು.

Key words: BJP- Opposition leader – not – appointed – DCM -DK Shivakumar