ವ್ಯಾಕರಣ ಮೇಸ್ಟ್ರು ದಾರಿ ತಪ್ಪಿಸುತ್ತಿದ್ದಾರೆ. ಬೇರೆಯವರಿಗೂ ಸ್ವಲ್ಪ ಕಾನೂನು ಗೊತ್ತಿದೆ : ಸಿದ್ದು ಕಾಲೆಳೆದ ಸುರೇಶ್ಕುಮಾರ್..!

 

ಬೆಂಗಳೂರು, ಜು.09, 2019 : (www.justkannada.in news) ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಕಾಂಗ್ರೆಸ್ ಪಕ್ಷ ಯಾವುದೇ ಶಿಸ್ತು ಕ್ರಮ ಜರುಗಿಸಲಾಗದು ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಫೇಸ್ ಬುಕ್ ನಲ್ಲಿ ಸ್ಟೇಟಸ್ ಬರೆದುಕೊಂಡಿರುವ ಸುರೇಶ್ ಕುಮಾರ್ ಹೇಳಿರುವುದಿಷ್ಟು….

ಆ ಕೆಲವು ಶಾಸಕರು ರಾಜಿನಾಮೆ ನೀಡಿರುವುದು ತಮ್ಮ ಶಾಸಕ ಸ್ಥಾನಕ್ಕೆ, ತಮ್ಮ ಪಕ್ಷಕ್ಕಲ್ಲ(ಕಾಂಗ್ರೆಸಿ ಗಲ್ಲ).
ಯಾವುದೇ ಕಾರಣಕ್ಕೂ ಇದು ಪಕ್ಷಾಂತರ ವಿರೋಧಿ ಕಾಯ್ದೆ (Anti-defection law) ಉಲ್ಲಂಘನೆಯಲ್ಲ.
ಅವರ ವಿರುದ್ಧ ಯಾವುದೇ ಕ್ರಮ ಸಾಧ್ಯವಿಲ್ಲ. ವ್ಯಾಕರಣ ಮೇಸ್ಟ್ರು ದಾರಿ ತಪ್ಪಿಸುತ್ತಿದ್ದಾರೆ. ಬೇರೆಯವರಿಗೂ ಸ್ವಲ್ಪ ಕಾನೂನು ಗೊತ್ತಿದೆ.

———

key words : bjp-sureshkumar-congress-politics-bangalore