ಕೆ.ಆರ್ ಪೇಟೆ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು…

ಮಂಡ್ಯ,ಡಿ,9,2019(www.justkannada.in):  ಕೆ.ಆರ್ ಪೇಟೆ ಕ್ಷೇತ್ರ ಮತ್ತು  ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಭರ್ಜರಿ  ಜಯ ದಾಖಲಿಸಿದರೇ ಕೆ.ಆರ್ ಪೇಟೆಯಲ್ಲಿ ಮೊದಲ ಬಾರಿಗೆ ಕಮಲ ಅರಳಿದೆ.

ಕೆ.ಆರ್ ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ 5 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿ ಗೆಲುವು ಪಡೆದಿದ್ದಾರೆ ಎನ್ನಲಾಗಿದೆ. ಗೆಲುವಿನ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಕಾಗಾವಾಡ ಉಪ ಚುನಾವಣೆಯ ಕ್ಷೇತದ 10ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್ 50,885 ಮತಗಳ ಮೂಲಕ ಗೆಲುವಿನ ನಗೆಯತ್ತ ದಾಪುಗಾಲು ಇಡುತ್ತಿದ್ದಾರೆ. ಅಲ್ಲದೇ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.

Key words: BJP wins – KR Pate – Chikkaballapur -constituency.