ಜಿಲ್ಲಾಡಳಿತ ಭವನ, ಸರ್ಕಾರಿ ಕಚೇರಿ ಸ್ಫೋಟಿಸುವುದಾಗಿ ಬಾಂಬ್​​ ಬೆದರಿಕೆ

ಗದಗ, ಡಿಸೆಂಬರ್​​,15,2025 (www.justkannada.in): ಗದಗ  ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ  ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು ಗದಗ ಜಿಲ್ಲಾಡಳಿತ ಭವನದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಅರ್ನಾ ಅಶ್ವಿನ್ ಶೇಖರ್ ಎಂಬ ಇ-ಮೇಲ್ ಐಡಿಯಿಂದ ಬಾಂಬ್​​ ಬೆದರಿಕೆ ಹಾಕಲಾಗಿದೆ. ನಿಮ್ಮ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐದು ಬಾಂಬ್​​ಗಳನ್ನು ಶೀಘ್ರದಲ್ಲೇ ಸ್ಫೋಟಿಸಲಾಗುವುದು. ಪಾಕಿಸ್ತಾನ-ತಮಿಳುನಾಡು ಡಿಎಂಕೆ 2026ರ ಚುನಾವಣೆಗೆ ಗಮನವನ್ನು ಬೇರೆಡೆ ಸೆಳೆಯಲು ಬಯಸುತ್ತಿದೆ ಎಂದು ಉಲ್ಲೇಖಿಸಲಾಗಿದೆ.​​

ಸದ್ಯ ಗದಗ ಜಿಲ್ಲಾಡಳಿತ ಭವನದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಶ್ವಾನದಳ, ಬಾಂಬ್ ಪತ್ತೆದಳ ಸಿಬ್ಬಂದಿ ಇಂಚಿಂಚು ತಪಾಸಣೆ ಮಾಡಿದ್ದಾರೆ.  ಡಿವೈಎಸ್​ಪಿ ಮುರ್ತುಜಾ ಖಾಜಿ, ಸಿಪಿಐ ಲಾಲಸಾಬ್ ಜೂಲಕಟ್ಟಿ, ಸಿದ್ದರಾಮೇಶ್​​, ಪಿಎಸ್ಐ ವ್ಹಿಜಿ ಪವಾರ ಸೇರಿದಂತೆ ಅಧಿಕಾರಿಗಳಿಂದ ಪರಿಶೀಲನೆ  ನಡೆಸಲಾಗಿದೆ.

ಹಾಗೆಯೇ ಮಂಗಳೂರಿನ ಆರ್‌ಟಿಒ ಕಚೇರಿಗೂ ಇ-ಮೇಲ್‌ಗೆ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ. ಮಂಗಳೂರಿನ ನೆಹರು ಮೈದಾನದ ಬಳಿಯ ಆರ್‌ಟಿಒ ಕಚೇರಿಗೆ 5 ಕಡೆ ಬಾಂಬ್‌ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಮೇಲ್​​ ರವಾನಿಸಲಾಗಿದೆ. ಸದ್ಯ ಆರ್‌ಟಿಒ ಕಚೇರಿಗೆ ಮಂಗಳೂರು ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಇಡೀ ಕಟ್ಟಡವನ್ನು ತಪಾಸಣೆ ನಡೆಸಲಾಗುತ್ತಿದೆ.

Key words: Bomb threat, DC Office, building, government office