“ಎಲುಬಿಲ್ಲದ ನಾಲಿಗೆ ಏನನ್ನಾದರೂ ಹೇಳುತ್ತವೆ” : ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು,ಮಾರ್ಚ್,14,2021 (www.justkannada.in) : ಸಿಡಿ ರಾಮ, ಬಾಂಬೆ ರಾಮ ಎಂದು ಎಲುಬಿಲ್ಲದ ನಾಲಿಗೆ ಏನನ್ನಾದರೂ ಹೇಳುತ್ತವೆ. ರಾಜ್ಯದ ಜನ ಕಾಂಗ್ರೆಸ್ಸಿಗರಿಗೆ ತಕ್ಕ ಉತ್ತರ ಕೊಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

jkಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಸಿಡಿ ವಿಷಯವಾಗಿ ಎಸ್ಐಟಿ ತನಿಖೆ ನಡೆಯುತ್ತಿದ್ದು, ರಾಜ್ಯದ ಜನರಿಗೆ ಸತ್ಯ ಏನಿದೆ ಎಂಬುದು ಶೀಘ್ರವೇ ಗೊತ್ತಾಗಲಿದೆ ಎಂದಿದ್ದಾರೆ. 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸದೃಢವಾಗಿದೆ. ಬಿ.ಎಸ್.ಯಡಿಯೂರಪ್ಪ ಸರ್ಕಾರ ಇರುವಂಥ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಗೂಂಡಾಗಿರಿಗೆ ಅವಕಾಶ ಕೊಡುವುದಿಲ್ಲ. ಭದ್ರಾವತಿಯಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆಭದ್ರಾವತಿ ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಒಂದು ರೀತಿಯಲ್ಲಿ ತುಘಲಕ್ ದರ್ಬಾರ್ ನಡೆಸಿದ್ದು ಇದನ್ನು ಕಾಂಗ್ರೆಸ್ ನಾಯಕರು ಬೆಂಬಲಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

mysore- BS Yeddyurappa -development, - leader-BY Vijayendra.

ದೇಶದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿರುವ ಕಾಂಗ್ರೆಸ್ ಶಿವಮೊಗ್ಗದಲ್ಲಿ ಹೋರಾಟ ನಡೆಸುವ ಮೂಲಕ ತನ್ನ ಅಸ್ತಿತ್ವದ ಹುಡುಕಾಟದಲ್ಲಿ ತೊಡಗಿದೆ ಎಂದು ವ್ಯಂಗವಾಗಿ ನುಡಿದಿದ್ದಾರೆ. 

key words : boneless-tongue-Something-Will say-State-BJP-vice president-B.Y.Vijayendra