Monday, August 10, 2026

BDA Apartments

Home Front Page ಅಧಿವೇಶನದಲ್ಲಿ ಸರ್ಕಾರದ ತಪ್ಪು ಹೊರಗೆಳೆಯುವ ಕಿವಿ ಹಿಂಡುವ ಕೆಲಸ ಮಾಡಿದ್ದೇವೆ- ಆರ್.ಅಶೋಕ್

ಅಧಿವೇಶನದಲ್ಲಿ ಸರ್ಕಾರದ ತಪ್ಪು ಹೊರಗೆಳೆಯುವ ಕಿವಿ ಹಿಂಡುವ ಕೆಲಸ ಮಾಡಿದ್ದೇವೆ- ಆರ್.ಅಶೋಕ್

ಬೆಂಗಳೂರು,ಮಾರ್ಚ್,26,2026 (www.justkannada.in):  ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರದ ತಪ್ಪುಗಳನ್ನು ಹೊರಗೆಳೆಯುವ  ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಿದ್ದೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.

ಇಂದಿಗೆ ವಿಧಾನಮಂಡಲ ಬಜೆಟ್ ಅಧಿವೇಶನ ಕೊನೆಗೊಂಡಿದ್ದು ವಿಧಾನಸಭೆ ಮತ್ತು ಪರಿಷತ್ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಲಾಯಿತು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್ ,ಸರ್ವೇ ಅಧಿಕಾರಿಯೊಬ್ಬ ಲಂಚ ಪಡೆದು ಸಿಕ್ಕಿಬಿದ್ದು ಸಸ್ಪೆಂಡ್ ಆಗಿದ್ದಾನೆ. ಫೋನ್ ಪೇನಲ್ಲಿ ಲಂಚ ತೆಗೆದುಕೊಂಡು ಸಿಕ್ಕಿಬಿದ್ದಿದ್ದಾನೆ. ಜಕ್ಕೂರು ಏರೋ ಡ್ರೋಮ್ ಪರಭಾರೆಗೆ ಮುಂದಾಗಿದ್ದರು. ನಾವು ಹೋರಾಟ ಮಾಡಿ ಅದನ್ನ ಉಳಿಸಿದ್ದೇವೆ. ಇವತ್ತು ಬೆಂಗಳೂರು ಅಭಿವೃದ್ದಿ ಬಗ್ಗೆ ಚರ್ಚೆ ಮಾಡಿದ್ದಾರೆ.  ಅಧಿವೇಶನದಲ್ಲಿ ಸರ್ಕಾರದ ಕಿವಿ ಹಿಡುವ ಕೆಲಸ ಮಾಡಿದ್ದೇವೆ ಎಂದರು.

ಈ ಬಾರಿಯ ಬಜೆಟ್ ನಲ್ಲಿ ಸಾಲದ ಕೂಪವೇ ಇದೆ. ರಾಜ್ಯದ ಜನತೆಯ ಮೇಲೆ ಸಾಲದ ಹೊರೆಯೇ ಹಾಕಿದ್ದಾರೆ ಸರ್ಕಾರ ತಪ್ಪು ಒಪ್ಪಿಕೊಳ್ಳುವ ರೀತಿ ಹೋರಾಟ ಮಾಡಿದ್ದೇವೆ.  ಮೈಸೂರು ಸಿಲ್ಕ್ ಫ್ಯಾಕ್ಟರಿ ಉಳಿಸುವ ಕೆಲಸ ಮಾಡಿದ್ದೇವೆ. ಸರ್ಕಾರದ ತಪ್ಪುಗಳನ್ನ ಹೊರಗೆಳೆಯುವ ಕೆಲಸ ಮಾಡಿದ್ದೇವೆ. ಎಲ್ಲಾ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಆರ್.ಅಶೋಕ್ ತಿಳಿಸಿದರು.

Key words: Budget Session, exposing, government, mistakes, R. Ashok