Wednesday, September 9, 2026

BDA Apartments

Home Front Page ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು ಇದೀಗ  ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಇಂದು ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್  ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ. ನನಗೆ ಹೈಕಮಾಂಡ್ ಮೇಲೆ ಸಂಪೂರ್ಣವಾದ ವಿಶ್ವಾಸವಿದೆ.  ಸಿಎಂ ಆಗಿ ಮುಂದುವರೆಯಿರಿ ಅಂದರೆ ಮುಂದುವರೆಯುತ್ತೇನೆ. ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ ಯಾರು ಏನು ಹೇಳುತ್ತಾರೆ ಎಂಬುದು ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೆ ಮುಖ್ಯ ಎಂದರು.

ನನಗೆ ಬಜೆಟ್ ದಾಖಲೆಗಳ ಮೇಲೆ ನಂಬಿಕೆ ಇಲ್ಲ. ಇನ್ನೆರಡು ಬಜೆಟ್ ಮಂಡಿಸುವ ಅವಕಾಶ ಸಿಕ್ಕರೆ ಮಂಡಿಸುತ್ತೇನೆ ಆದರೆ ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್.  ಇನ್ನುಂದೆ ಏನೇ ಪ್ರಶ್ನೆ ಕೇಳಿದರೂ ನನ್ನ ಉತ್ತರ ಹೈಕಮಾಂಡ್ ಎಂದರು.

ಮೈಸೂರಿನ ಜನ ಮಾತ್ರವಲ್ಲ ಇಡೀ ನಾಡಿನ ಜನ ನಾನು ಮುಂದುವರೆಯಬೇಕೆಂದು ಬಯಸಿದ್ದಾರೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: high command, chance, budgets, CM Siddaramaiah