ಬೆಂಗಳೂರು,ಜೂನ್,5,2025 (www.justkannada.in): ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ ಉಂಟಾದ 11 ಜನರ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಸರ್ಕಾರ ಕಾರ್ಯಕ್ರಮವನ್ನ ಸರಿಯಾಗಿ ನಿಭಾಯಿಸಬೇಕಿತ್ತು. ಸರ್ಕಾರ ಆತುರವಾಗಿ ಕಾರ್ಯಕ್ರಮ ನಡೆಸಿದೆ. ವಿಧಾನಸೌಧದಲ್ಲಿ ಕಾರ್ಯಕ್ರಮ ಬೇಕಿತ್ತಾ..? ವಿಧಾನಸೌದದ ಕಾರ್ಯಕ್ರಮ ಯಾರ ಪ್ಲಾನ್? ಸಂಜೆ ಕಾಲ್ತುಳಿತವಾದರೂ ಸಂಭ್ರಮಚರಣೆ ಮಾಡಿದ್ಯಾಕೆ ? ಎಂದು ಪ್ರಶ್ನಿಸಿದ್ದಾರೆ.
Key words: government, directly responsible, deaths, 11 people, BY Vijayendra
.