ಬೆಳಗಾವಿ,ಜನವರಿ,16,2026 (www.justkannaa.in): ಬಳ್ಳಾರಿ ಬ್ಯಾನರ್ ಗಲಾಟೆ ಖಂಡಿಸಿ ಬಿಜೆಪಿ ಪಾದಯಾತ್ರೆಯ ಗೊಂದಲ ಹಿನ್ನೆಲೆಯಲ್ಲಿ ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಶ್ರೀರಾಮುಲು ಅವರ ಹೇಳಿಕೆ ಗಮನಿಸಿದ್ದೇನೆ. ಪಾದಯಾತ್ರೆಗೆ ನನ್ನ ವೈಯಕ್ತಿಕ ವಿರೋಧ ಇಲ್ಲ. ಈ ಹಿಂದೆ ಪಾದಯಾತ್ರೆ ಮಾಡಿದಾಗ ಗೊಂದಲ ಸೃಷ್ಠಿಯಾಗಿತ್ತು. ಈಗ ಈ ರೀತಿಯ ಗೊಂದಲಕ್ಕೆ ಅವಕಾಶ ಕೊಡಬಾರದು. ಏನೇ ನಿರ್ಧಾರ ತೆಗದುಕೊಂಡರೂ ಕೇಂದ್ರದ ಗಮನಕ್ಕೆ ತರಬೇಕು ಎಂದರು.
ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ನಡೆಯಲಿದೆ ಬಳಿಕ ಕೇಂದ್ರ ನಾಯಕರ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.
Key words: Padayatra, Discussion , High Command, BY Vijayendra







