Thursday, August 6, 2026

BDA Apartments

Home Front Page ಸರ್ಕಾರ ಕರ್ನಾಟಕವನ್ನ ಕುಡುಕರ ರಾಜ್ಯವಾಗಿ ಮಾಡುತ್ತಿದೆ- ಬಿವೈ ವಿಜಯೇಂದ್ರ

ಸರ್ಕಾರ ಕರ್ನಾಟಕವನ್ನ ಕುಡುಕರ ರಾಜ್ಯವಾಗಿ ಮಾಡುತ್ತಿದೆ- ಬಿವೈ ವಿಜಯೇಂದ್ರ

ಬೆಂಗಳೂರು,ಫೆಬ್ರವರಿ,4,2026 (www.justkannada.in): ಕರ್ನಾಟಕದಲ್ಲಿ 500 ಮೀಟರ್ ಗೊಂದು ಮಧ್ಯದಂಗಡಿ ಇದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನ ಕುಡುಕರ ರಾಜ್ಯವಾಗಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.

ಇಂದು ವಿಧಾನಸೌಧದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ, ಅಬಕಾರಿ ಇಲಾಖೆಯಲ್ಲೇ 6 ಸಾವಿರ ಕೋಟಿ ರೂ. ಹಗರಣ ಆಗಿದೆ. 6 ಸಾವಿರ ಕೋಟಿ ಹಗರಣದ ಬಗ್ಗೆ ಆಯುಕ್ತರೇ ಹೇಳಿದ್ದಾರೆ.  ಭ್ರಷ್ಟಾಚಾರ ಕೇವಲ ಸಚಿವರಿಗೆ ಮಾತ್ರ ಸೀಮಿತವಾಗಿಲ್ಲ ಕಾಂಗ್ರೆಸ್ ಎಟಿಎಂ ಆಗಿ ಪರಿವರ್ತನೆ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ರಾಜೀನಾಮೆ ಕೊಟ್ಟರೆ ಯಾರ್ ಯಾರ ಬುಡಕ್ಕೆ ಬರುತ್ತೋ ಗೊತ್ತಿಲ್ಲ. ಅದಕ್ಕೆ ಸಿದ್ದರಾಮಯ್ಯ ಅಬಕಾರಿ ಸಚಿವರ ರಾಜೀನಾಮೆ ಪಡೆದಿಲ್ಲ.  ಇದೊಂದು ಭಂಡ ಸರ್ಕಾರ. ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: Government, Karnataka, Drunkards, state,  BY Vijayendra