ನೆಲ, ಜಲ‌, ಭಾಷೆ ವಿಷಯ ಬಂದಾಗ ಕನ್ನಡ ಇಂಡಸ್ಟ್ರಿ ಯಾವಾಗಲೂ ಬೆಂಬಲವಾಗಿ ನಿಲ್ಲುತ್ತೆ- ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮ.ಹರೀಶ್

ಬೆಂಗಳೂರು,ಸೆಪ್ಟಂಬರ್,20,2023(www.justkannada.in): ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಧ್ವನಿ ಎತ್ತದ ಕನ್ನಡ ಚಿತ್ರರಂಗದ ಕಲಾವಿದರ  ವಿರುದ್ಧ ರೈತರು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೆ ಈ ಕುರಿತು  ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮ.ಹರೀಶ್ ಪ್ರತಿಕ್ರಿಯಿಸಿದ್ದಾರೆ.

 ಕಾವೇರಿ ನದಿ ವಿಚಾರವಾಗಿ ಕನ್ನಡ ಚಲನಚಿತ್ರ ನಟರು ಧ್ವನಿ ಎತ್ತುತ್ತಿಲ್ಲ ಎಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟನೆ ನಡೆಸಿದ್ದವು.

ಈ ಕುರಿತು  ಪ್ರತಿಕ್ರಿಯಿಸಿರುವ ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮ.ಹರೀಶ್, ವಾಣಿಜ್ಯ ಮಂಡಳಿ ಮುಂದೇ ಬಂದು ಪ್ರತಿಭಟನೆ ಮಾಡುವುದು ನಮಗೂ ಗೊತ್ತಿರಲಿಲ್ಲ. ನೆಲ, ಜಲ‌, ಭಾಷೆ ವಿಷಯ ಬಂದಾಗ ಕನ್ನಡ ಸಿನಿಮಾರಂಗ ಯಾವತ್ತು ಬೆಂಬಲವಾಗಿ ನಿಲ್ಲುತ್ತೆ. ಸದ್ಯ ಫಿಲ್ಮ್ ಚೇಂಬರ್ ಎಲೆಕ್ಷನ್ ಇರುವ ಕಾರಣಕ್ಕೆ ಈ ಬಗ್ಗೆ ಚರ್ಚೆ ಮಾಡಿಲ್ಲ. ಹೊಸ ಕಮಿಟಿ ಬಂದ ಬಳಿಕ ಚರ್ಚೆ ಮಾಡಿ ಧ್ವನಿ ಎತ್ತುತ್ತೇವೆ ಎಂದು ತಿಳಿಸಿದರು.

Key words: cavery dispute-film industry- Ba. Ma. Harish