ಬೆಳ್ಳಂಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸ, ಕಚೇರಿ ಸೇರಿ ಹಲವೆಡೆ ಸಿಬಿಐ ದಾಳಿ, ಪರಿಶೀಲನೆ….

ಬೆಂಗಳೂರು, ಅಕ್ಟೋಬರ್,5,2020(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್  ಗೆ ಸಿಬಿಐ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದು ಡಿ.ಕೆ ಶಿವಕುಮಾರ್ ನಿವಾಸದ ಮೇಲೆ  ಸಿಬಿಐ ರೇಡ್ ಮಾಡಿ ಪರಿಶೀಲನೆ ನಡೆಸುತ್ತಿದೆ.jk-logo-justkannada-logo

ಬೆಂಗಳೂರಿನ ಸಿಬಿಐ ಅಧಿಕಾರಿಗಳ ತಂಡ  ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ಮನೆ, ಕನಕಪುರ ಸೇರಿದಂತೆ ಹಲವಡೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದೀಗ ಡಿ.ಕೆ ಶಿವಕುಮಾರ್ ಗೆ ಇಡಿ ವಿಚಾರಣೆ ಬಳಿಕ ಸಿಬಿಐ ಕಂಟಕ ಶುರುವಾಗಿದೆ. 60ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸ ಕಚೇರಿ ಸೇರಿ ಹಲವೆಡೆ ಸಿಬಿಐ ಅಧಿಕಾರಿಗಳು  ಬೆಳ್ಳಂಬೆಳಗ್ಗೆ 6 ಗಂಟೆಯಿಂದ ದಾಳಿ ನಡೆಸಿದ್ದು,  ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಮತ್ತೊಂದೆಡೆ, ಸಂಸದ ಡಿ.ಕೆ ಸುರೇಶ್ ಅವರ ಕನಕಪುರ ತಾಲೂಕಿನ ಕೆಂಚೇನಹಳ್ಳಿ ಮನೆ, ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ಬೆಳಿಗೆ 6 ಗಂಟೆಗೆ ದಾಳಿ ಮಾಡಿದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಗೆ ಅಖಾಡ ಸಿದ್ದವಾಗಿರುವ ಬೆನ್ನಲ್ಲೇ ಸಿಬಿಐ ದಾಳಿ ನಡೆದಿದೆ.
ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಕಳೆದ ವರ್ಷ ಡಿ.ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಐಟಿ ದಾಳಿ ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಇಡಿ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಅವರನ್ನು ದೆಹಲಿಯಲ್ಲಿ ಬಂಧಿಸಿದ್ದರು. ದೆಹಲಿಯ ತಿಹಾರ್ ಜೈಲಿನಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಸೆರೆವಾಸ ಅನುಭವಿಸಿದ್ದ ಡಿ.ಕೆ ಶಿವಕುಮಾರ್, ಜಾಮೀನಿನ ಮೇಲೆ ಹೊರ ಬಂದಿದ್ದರು.
ಕಳೆದ ವರ್ಷ ಅಧಿಕಾರಕ್ಕೆ ಬಂದಿಸಿದ್ದ ಬಿಎಸ್‍ವೈ ಸರ್ಕಾರ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಸಿಬಿಐ ತನಿಖೆ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಸಿಬಿಐ ತನಿಖೆ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್‍ನ ಏಕ ಸದಸ್ಯ ಪೀಠ, ದ್ವಿಸದಸ್ಯ ಪೀಠಗಳು ವಜಾ ಮಾಡಿದ್ದವು. ಆದರೂ ಮತ್ತೊಮ್ಮೆ ಡಿ.ಕೆ ಶಿವಕುಮಾರ್ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

Key words: CBI –attack- KPCC president- DK Sivakumar’s -residence