ಸಿಇಟಿ ಮುಂದೂಡಿಕೆ; ಅಗಸ್ಟ್‌ ನಲ್ಲಿ ನಡೆಯಲಿರುವ ಪರೀಕ್ಷೆ….

ಬೆಂಗಳೂರು,ಮೇ,12,2021(www.justkannada.in):  ಕೋವಿಡ್‌ ಎರಡನೇ ಅಲೆಯಿಂದಾಗಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು  ಮುಂದೂಡಲಾಗಿದ್ದು  ಈ ಹಿನ್ನೆಲೆಯಲ್ಲಿ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನೂ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ.jk

ಈ ಬಗ್ಗೆ ಪ್ರಕಟಣೆ ನೀಡಿರುವ ಡಿಸಿಎಂ ಅಶ್ವಥ್ ನಾರಾಯಣ್, ಹೊಸ ವೇಳಾಪಟ್ಟಿಯಂತೆ ಮುಂಬರುವ ಅಗಸ್ಟ್‌ 28 & 29ರಂದು ಸಿಇಟಿ ನಡೆಯಲಿದೆ. ಹಾಗೆಯೇ, 30ರಂದು ಕನ್ನಡ ಭಾಷಾ ಪರೀಕ್ಷೆ ಇರುತ್ತದೆ. ಶೀಘ್ರದಲ್ಲಿಯೇ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಮಾಹಿತಿ ನೀಡಿದ್ದಾರೆ.

ಈ ಮೊದಲು ಪ್ರಕಟಿಸಲಾಗಿದ್ದ ವೇಳಾಪಟ್ಟಿಯಂತೆ ಜುಲೈ 7 & 8 ರಂದು ಸಿಇಟಿ ಹಾಗೂ 9ರಂದು ಕನ್ನಡ ಪರೀಕ್ಷೆ ನಡೆಯಬೇಕಾಗಿತ್ತು.cet-postponement-examination-held-august

ಹೆಚ್ಚಿನ ವಿವರಗಳಿಗೆ https://cetonline.karnataka.gov.in/kea/ ವೆಬ್‌ ತಾಣಕ್ಕೆ ಭೇಟಿ ನೀಡಬಹುದು. ವಿದ್ಯಾರ್ಥಿಗಳು ಕೋವಿಡ್‌ನಿಂದ ಸುರಕ್ಷಿತವಾಗಿರಿ ಮತ್ತೂ ಪಿಯುಸಿ ಮತ್ತು ಸಿಇಟಿ ಪರೀಕ್ಷೆಗೆ ಉತ್ತಮ ಸಿದ್ಧತೆ ಮಾಡಿಕೊಳ್ಳಿ ಎಂದು ಡಾ.ಅಶ್ವತ್ಥನಾರಾಯಣ ಹಾರೈಸಿದ್ದಾರೆ.

Key words: CET –postponement-Examination – held -August.