ಪತ್ನಿ ಜತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟೆಂಪಲ್ ರನ್

ಬೆಂಗಳೂರು, ಫೆಬ್ರವರಿ 07, 2020 (www.justkannada.in): ಮದಕರಿ ನಾಯಕ ಸಿನಿಮಾ ಶೂಟಿಂಗ್ ಗೂ ಮೊದಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಟೆಂಪಲ್ ರನ್ ನಡೆಸಿದ್ದಾರೆ.

ಪತ್ನಿ ವಿಜಯಲಕ್ಷ್ಮಿ ಮತ್ತು ಸ್ನೇಹಿತರ ಜತೆ ದರ್ಶನ್ ತಮಿಳುನಾಡಿನ ತಿರುನಲ್ಲಾರ್ ಶನಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ತಿಂಗಳಲ್ಲೇ ದರ್ಶನ್ ಹುಟ್ಟು ಹಬ್ಬ ಜತೆಗೆ ಐತಿಹಾಸಿಕ ಸಿನಿಮಾ ‘ಮದಕರಿನಾಯಕ’ಕ್ಕೆ ಚಾಲನೆ ಸಿಗುತ್ತಿದೆ. ಈ ಹಿನ್ನಲೆಯಲ್ಲಿ ದರ್ಶನ್ ದೇವಾಲಯ ಸಂದರ್ಶನ ಮಾಡಿದ್ದಾರೆ.