ಡಿಕೆ ಶಿವಕುಮಾರ್ ‘ಸಿಎಂ’ ಆಗಲೆಂದು ಅಭಿಮಾನಿಗಳಿಂದ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

ಮೈಸೂರು,ನವೆಂಬರ್,28,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಅಭಿಮಾನಿಗಳು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಳ್ಳಿರಥ ಎಳೆದು, ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಡಿಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಡಿಕೆ ಶಿವಕುಮಾರ್ ಅವರ ಭಾವಚಿತ್ರವನ್ನು ರಥದ ಮುಂಭಾಗದಲ್ಲಿ ಇರಿಸಿ, ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಕೆಪಿಸಿಸಿ ಸದಸ್ಯ ಜಿ. ಶ್ರೀನಾಥ್ ಬಾಬು ಅವರು, “ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರ ಆಡಳಿತ ವೈಖರಿ, ಅಭಿವೃದ್ಧಿ ದೃಷ್ಟಿಕೋನ ಮತ್ತು ಜನಪರ ಕೆಲಸಗಳು ಅವರನ್ನು ಪರಿಣಾಮಕಾರಿ ನಾಯಕನನ್ನಾಗಿ ತೋರಿಸಿವೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳ ಗೆಲುವಿನಲ್ಲಿ ಅವರ ಪರಿಶ್ರಮ ಮಹತ್ತರ ಪಾತ್ರ ವಹಿಸಿದೆ. ಹೀಗಾಗಿ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಆಗುವ ಅವಕಾಶ ನೀಡಬೇಕೆಂಬುದು ನಮ್ಮ ಮನವಿ” ಎಂದರು.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ಜಿ. ರಾಘವೇಂದ್ರ, ಹರೀಶ್ ಗೌಡ, ಎಸ್.ಎನ್. ರಾಜೇಶ್, ಶಶಾಂಕ್ ಗೌಡ, ಚಂದ್ರು, ಕಿರಣ್, ಪ್ರಸನ್ನ ಕುಮಾರ್ (ಅಪ್ಪಿ), ದಿನೇಶ್, ವಿನೋದ್, ಮಾತ್ಯುಸ್ ಸೇರಿ ಹಲವಾರು ಅಭಿಮಾನಿಗಳು ಉಪಸ್ಥಿತರಿದ್ದರು.

Key words: Chamundi Hills, special prayers, DK Shivakumar, becomes, CM