ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಆರ್.ಅಶೋಕ್ ಒತ್ತಾಯ.

ಬೆಂಗಳೂರು,ಡಿಸೆಂಬರ್,30,2023(www.justkannada.in):  ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ಗುರಿಯಾಗಿರುವ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆಗೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್,  ಶಿಕ್ಷಣ ಸಚಿವರ ಪಾಡೇ ಹೀಗಾದ್ರೆ ಹೇಗೆ..?  ಚೆಕ್   ಬೌನ್ಸ್ ಅಂದ್ರೆ  ಮೋಸ ಮಾಡಿದ್ದಾರೆ  ಅಂತಾ. ಕೋರ್ಟ್  ಶಿಕ್ಷೆ ವಿಧಿಸಿದರೂ  ಸಹ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನ ನೀಡಿಲ್ಲ. ಸರ್ಕಾರ ಲೂಟಿ ಹೊಡೆಯಲು ಒಂಟಿ ಕಾಲಲ್ಲಿ ನಿಂತಿದೆ . ಕೂಡಲೇ ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.

ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್  6,96, 70,000 ರೂ. ದಂಡ ವಿಧಿಸಿದೆ.

Key words: check bounce –case- R. Ashok –demands- resignation -Minister -Madhu Bangarappa.