ಬೆಂಗಳೂರು,ಏಪ್ರಿಲ್,25,2026 (www.justkannada.in): ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದಕ್ಕೆ ಆಕ್ಷೇಪವೆತ್ತಿರುವ ನಟ ಚೇತನ್ ಅಹಿಂಸಾ ವಿರುದ್ದ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು ಇದೀಗ ನಿರ್ಮಾಪಕ ಸಾ.ರಾ ಗೋವಿಂದು ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿರುವ ಸಾ.ರಾ ಗೋವಿಂದು, ಡಾ. ರಾಜ್ ಕುಮಾರ್ ಬಗ್ಗೆ ಅವನಿಗೆ ಏನು ಗೊತ್ತು? ಚೇತನ್ ನನ್ನು ರಾಜ್ಯದಿಂದ ಗಡಿಪಾರು ಮಾಡಿ. ರಾಜ್ಯದಲ್ಲಿ ಆತ ಇರಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಈ ವಿಚಾರವಾಗಿ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಬೇಕು ನಟ ಚೇತನ್ ಕ್ಷಮೆ ಯಾರಿಗೆ ಬೇಕು ಆತ ಇಲ್ಲಿರಬಾರದು. ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
Key words: Dr. Rajkumar, Chethan Ahimsa, Sa.Ra Govindu







