ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲಾ ಪ್ರವಾಸ

ಬೆಂಗಳೂರು, ಆಗಸ್ಟ್ 21, 2022 (www.justkannada.in): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹಾವೇರಿ ಜಿಲ್ಲಾ ಪ್ರವಾಸಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಶಿಗ್ಗಾಂವಿಗೆ ಆಗಮಿಸಿ ಕೋಟ್ ಆವರಣದಲ್ಲಿ ಆಯೋಜಿಸಿರುವ ವಕೀಲರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 12-45ಕ್ಕೆ ಸವಣೂರ ಕೋಟ್ ಆವರಣದಲ್ಲಿ ವಕೀಲರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮಧ್ಯಾಹ್ನ 2-15ಕ್ಕೆ ಸವಣೂರಿನಿಂದ ಹಾವೇರಿಗೆ ಆಮಿಸಲಿದ್ದಾರೆ. ಮಧ್ಯಾಹ್ನ 3-30 ಗಂಟೆಗೆ ಹಾವೇರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 5-30ಕ್ಕೆ ಹಾವೇರಿ ಪ್ರವಾಸಿ ಮಂದಿರದ ಹತ್ತಿರ ಸಂಚಾರಿ ಪೊಲೀಸ್ ಠಾಣೆ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. 5-45ಕ್ಕೆ ಹಾವೇರಿಯಿಂದ ಪ್ರಯಾಣಬೆಳೆಸಿ ಶಿಗ್ಗಾಂವ ಮಾರ್ಗವಾಗಿ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.