ಉತ್ತರ ಕನ್ನಡ,ಜೂನ್,26,2025 (www.justkannada.in): ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಳವಳ್ಳಿಯಲ್ಲಿ ಈ ಘಟನೆ ನಡೆದಿದೆ. ಶ್ರೀಕಾಂತ್ ಎಂಬುವವರ ಪುತ್ರಿ ಸಾನ್ವಿ (2) ಮೃತಪಟ್ಟ ಮಗು. ತಂದೆ ಜೊತೆ ದನದ ಕೊಟ್ಟಿಗೆಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ.
ಸಾನ್ವಿ ತಂದೆ ಶ್ರೀಕಾಂತ್ ಜೊತೆ ದನದ ಕೊಟ್ಟಿಗೆ ಹೋಗಿದ್ದು, ತಂದೆ ಶ್ರೀಕಾಂತ್ ಕೊಟ್ಟಿಗೆ ಕೆಲಸದಲ್ಲಿ ಬ್ಯುಸಿಯಾಗಿದ್ದರು. ಮಗಳ ಬಗ್ಗೆ ಗಮನ ಹರಿಸಲಿಲ್ಲ. ಬಳಿಕ ಮಗಳನ್ನು ಹುಡುಕಾಡಿದ್ದು ಈ ವೇಳೆ ಮಗು ಸಾನ್ವಿ ಗೊಬ್ಬರದ ಗುಂಡಿಯಲ್ಲಿ ಬಿದ್ದಿದ್ದಾಳೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ ಅಷ್ಟರಲ್ಲಿ ಬಾಲಕಿ ಮೃತಪಟ್ಟಿದ್ದಳು. ಮಳೆಗಾಲವಾದ್ದರಿಂದ ತೆರೆದ ಗೊಬ್ಬರ ಗುಂಡಿಯಲ್ಲಿ ನೀರು ತುಂಬಿತ್ತು, ಆದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: Two-year-old child, dies , falling , manure pit