Thursday, September 3, 2026

BDA Apartments

Home Crime KPSC ನೇಮಕಾತಿ ಹಗರಣ: ಶಿವಶಂಕರಪ್ಪ ಸಾಹುಕಾರ್ ಗೆ CID ನೋಟಿಸ್

KPSC ನೇಮಕಾತಿ ಹಗರಣ: ಶಿವಶಂಕರಪ್ಪ ಸಾಹುಕಾರ್ ಗೆ CID ನೋಟಿಸ್

ಬೆಂಗಳೂರು,ಸೆಪ್ಟಂಬರ್,3,2026 (www.justkannada.in):  ಕೆಪಿಎಸ್ ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಇದೀಗ ವಿಚಾರಣೆಗ ಹಾಜರಾಗುವಂತೆ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಗೆ ನೋಟಿಸ್ ಜಾರಿ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹಗರಣ ಸಂಬಂಧ  ಐಎಎಸ್ ಅಧಿಕಾರಿ ಜ್ಞಾನೇಂದ್ರ ಮತ್ತು ಬಸವರಾಜ್ ಬಂಧನದ ಬಳಿಕ ಇದೀಗ ಶಿವಶಂಕರಪ್ಪ ಸಾಹುಕಾರ್ ಗೆ ಸಿಐಡಿ  ಬುಲಾವ್ ನೀಡಿದೆ. ಈಗಾಗಲೇ ಶಿವಶಂಕರಪ್ಪ ಸಾಹುಕಾರ್ ಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ  .

ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಇಂದು ಅಥವಾ ನಾಳೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

Key words: KPSC, recruitment scam, CID ,notice ,Shivashankarappa Sahukar