Saturday, August 15, 2026

BDA Apartments

Home Front Page ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ಏರ್ ಲಿಫ್ಟ್ ಗಾಗಿ ಕೇಂದ್ರದ ಜತೆ ಸಂಪರ್ಕ- ಸಿಎಂ ಬೊಮ್ಮಾಯಿ.

ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ಏರ್ ಲಿಫ್ಟ್ ಗಾಗಿ ಕೇಂದ್ರದ ಜತೆ ಸಂಪರ್ಕ- ಸಿಎಂ ಬೊಮ್ಮಾಯಿ.

ಹುಬ್ಬಳ್ಳಿ,ಫೆಬ್ರವರಿ,28,2022(www.justkannada.in): ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನ ಏರ್ ಲಿಫ್ಟ್ ಮಾಡಲು ಕೇಂದ್ರದ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ 300ಕ್ಕೂ ಹೆಚ್ಚು ಜನ ಉಕ್ರೇನ್ ನಲ್ಲಿ ಸಿಲುಕಿದ್ದಾರೆ. ಕನ್ನಡಿಗರ ಏರ್ ಲಿಫ್ಟ್ ಗಾಗಿ ಕೇಂಧ್ರದ ಜತೆ ಸಂರ್ಕದಲ್ಲಿದ್ದೇವೆ. ಇನ್ನೆರೆಡು ದಿನಗಳಲ್ಲಿ ಎಲ್ಲಾ ಸಮಸ್ಯೆ ಬಗೆಹರಿಯುತ್ತದೆ ಎಂದರು.

ಕಾಂಗ್ರೆಸ್ ಪಾದಯಾತ್ರೆಗೆ ಮಹತ್ವ ಕೊಡಬೇಕಿಲ್ಲ. ರಾಜಕೀಯಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದೆ ಎಂದು ಸಿಎಂ ಬೊಮ್ಮಾಯಿ ಟೀಕಿಸಿದರು.

Key words: cm bommai-ukrane-student