ಐದು ದಿನಗಳ ಕಾಲ ಸಿಎಂ ಬಿಎಸ್ ವೈ ಸೆಲ್ಫ್ ಹೋಂ ಕ್ವಾರಂಟೈನ್ ….

ಬೆಂಗಳೂರು,ಜು,10,2020(www.justkannada.in):  ಸಿಎಂ ಗೃಹ ಕಚೇರಿ ಕೃಷ್ಣಾ ಹಾಗೂ ಕಾವೇರಿ ನಿವಾಸಕ್ಕೆ ಮಹಾಮಾರಿ ಕೊರೋನಾ ಕಾಲಿಟ್ಟಿದ್ದು ಅಲ್ಲಿನ ಸಿಬ್ಬಂದಿಗೆ ಸೋಂಕು ಇರುವ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಐದು ದಿನಗಳ ಕಾಲ ಸೆಲ್ಫ್ ಹೋಂ ಕ್ವಾರಂಟೈನ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.jk-logo-justkannada-logo

ಕಾವೇರಿ ನಿವಾಸದ ಸಿಬ್ಬಂದಿಗೆ ಕೊರೋನಾ ಸೋಂಕು ಹಿನ್ನೆಲೆ ಸೆಲ್ಫ್ ಹೋಂ ಕ್ವಾರಂಟೈನ್ ಗೆ ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಉಳಿಯಲಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕರು ಸಿಎಂ ಭೇಟಿಗೆ ಅವಕಾಶ ಇರುವುದಿಲ್ಲ. ಸಿಎಂ ವಿಡಿಯೋ ಕಾನ್ಫರೆನ್ಸ್‌ ಮೂಲಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಬುಧವಾರದವರೆಗೆ ಸಿಎಂ ಬಿಎಸ್ ವೈ ಸೆಲ್ಫ್ ಹೋಂ ಕ್ವಾರಂಟೈನ್ ನಲ್ಲಿದ್ದು ಬುಧವಾರದ ನಂತರ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

Key words: CM BS Yeddyurappa- Self Home Quarantine -five days.