Tuesday, September 15, 2026

BDA Apartments

ಆಸ್ಪತ್ರೆಗೆ ಭೇಟಿ ನೀಡಿ ರಾಜ್ಯಪಾಲ ವಜುಭಾಯಿ ವಾಲಾ ಅವರ ಆರೋಗ್ಯ ವಿಚಾರಿಸಿದ ಸ...
Home Front Page ಆಸ್ಪತ್ರೆಗೆ ಭೇಟಿ ನೀಡಿ ರಾಜ್ಯಪಾಲ ವಜುಭಾಯಿ ವಾಲಾ ಅವರ ಆರೋಗ್ಯ ವಿಚಾರಿಸಿದ ಸಿಎಂ ಬಿಎಸ್ ಯಡಿಯೂರಪ್ಪ….

ಆಸ್ಪತ್ರೆಗೆ ಭೇಟಿ ನೀಡಿ ರಾಜ್ಯಪಾಲ ವಜುಭಾಯಿ ವಾಲಾ ಅವರ ಆರೋಗ್ಯ ವಿಚಾರಿಸಿದ ಸಿಎಂ ಬಿಎಸ್ ಯಡಿಯೂರಪ್ಪ….

ಬೆಂಗಳೂರು,ನ,27,2019(www.justkannada.in): ಅನಾರೋಗ್ಯದ ಹಿನ್ನೆಲೆ ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಖಾಸಗೀ ಆಸ್ಪತ್ರೆಯಲ್ಲಿ ದಾಖಾಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಬಗ್ಗೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯಪಾಲರವರಿಗೆ, ಚಿಕ್ಕ ಸರ್ಜರಿಯಾಗಿದೆ ಆದ ಕಾರಣ ನಾನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ.  ಆ ಸಮಯದಲ್ಲಿ ವಜುಬಾಯಿ ವಾಲಾರವರು, ನಾನು ಆರಾಮಾಗಿದ್ದೇನೆ ಮೂರು ದಿನ ವಿಶ್ರಾಂತಿ ತೆಗೆದುಕೊಂಡು ನಂತರ ಕಛೇರಿಯಲ್ಲಿ ಸಿಗುತ್ತೇನೆ ಎಂದು ಹೇಳಿದರು. ಹಾಗೂ ಉಪಚುನಾವಣೆ ಹೇಗೆ ನಡೆಯುತ್ತಿದೆ? ಉಪಚುನಾವಣೆಯನ್ನು ಚೆನ್ನಾಗಿ ನಡೆಸಿ ಎಂದು  ಸೂಚಿಸಿದರು ಎಂದರು.

ಈ ಸಂದರ್ಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಜತೆ ಸಂಸದೆ ಶೋಭಾ ಕರಂದ್ಲಾಜೆ ಅವರು ಉಪಸ್ಥಿತರಿದ್ದರು.

Key words: CM BS Yeddyurappa- visit- hospital- Governor -Vajubhai Wala -health