Friday, September 11, 2026

BDA Apartments

Home Front Page ಸಿದ್ದರಾಮಯ್ಯ ಮತ್ತು ಹೆಚ್.ಡಿ ಕುಮಾರಸ್ವಾಮಿಗೆ ಮಾನನಷ್ಟ ಮೊಕದ್ದಮೆ ದಾಖಲಿಸುವ ಎಚ್ಚರಿಕೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ…

ಸಿದ್ದರಾಮಯ್ಯ ಮತ್ತು ಹೆಚ್.ಡಿ ಕುಮಾರಸ್ವಾಮಿಗೆ ಮಾನನಷ್ಟ ಮೊಕದ್ದಮೆ ದಾಖಲಿಸುವ ಎಚ್ಚರಿಕೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ…

ಉತ್ತರ ಕನ್ನಡ,ನ,28,2019(www.justkannada.in):  ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ಧರಾಮಯ್ಯಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಅನರ್ಹ ಶಾಸಕರನ್ನ ಹಣಕೊಟ್ಟು ಖರೀದಿ ಮಾಡಿದ್ದಾರೆ ಎಂದು ಆರೋಪಿಸುತ್ತಿರುವ ಸಿದ್ಧರಾಮಯ್ಯ ಮತ್ತು ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ಚಿಂತನೆ ನಡೆಸಿದ್ದೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ  ಹೇಳಿಕೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಮುಂಡಗೋಡದಲ್ಲಿ ಅನರ್ಹ ಶಾಸಕ ಶಿವರಾಮ್​ ಹೆಬ್ಬಾರ್​ ಪರ ಪ್ರಚಾರ  ನಡೆಸಿ ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಶಾಸಕರನ್ನ ಹಣ ಕೊಟ್ಟು ಖರೀದಿ ಮಾಡುತ್ತಿದ್ದಾರೆ ಎಂದು ನಮ್ಮ ವಿರುದ್ದ ಆರೋಪ ಮಾಡು ಮಾಡುತ್ತಿದ್ದಾರೆ. ಪದೇ ಪದೇ ನಮ್ಮವರ ವಿರುದ್ದ ಆರೋಪ ಮಾಡುತ್ತಿರುವುದರಿಂದ ಅವಮಾನವಾಗುತ್ತಿದೆ.  ಹೀಗಾಗಿ ಅವರ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ಚಿಂತನೆ ನಡೆಸಿದ್ದೇನೆ. ಅವರ ಹೇಳಿಕೆಗಳನ್ನ ರೆಕಾರ್ಡ್ ಮಾಡಿ ತೆಗೆದುಕೊಳ್ಳುತ್ತಿದ್ದೇನೆ. ಎಲ್ಲಾ ದಾಖಲೆಗಳನ್ನ ಸಂಗ್ರಹಿಸುತ್ತಿದ್ದೇನೆ ಎಂದು ಹೇಳಿದರು.

ಬಿಎಸ್​ ಯಡಿಯೂರಪ್ಪ ಅವರು 17 ಜನ ಶಾಸಕರನ್ನು ಕುದುರೆ ವ್ಯಾಪಾರ ನಡೆಸಿ ಖರೀದಿಸಿ ಸರ್ಕಾರ ರಚಿಸಿದ್ದಾರೆ. ಈಗ ಜನರೆದುರು ಮತಯಾಚಿಸುತ್ತಿದ್ದಾರೆ. ಹಣದ ಹೊಳೆಯನ್ನ ಹರಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ನಿನ್ನೆ ವಾಗ್ದಾಳಿ ನಡೆಸಿದ್ದರು.

Key words: CM BS Yeddyurappa – warned -Siddaramaiah -HD Kumaraswamy – file – defamation case