ಚಿತ್ರದುರ್ಗ,ಫೆಬ್ರವರಿ,24,2026 (www.justkannada.in): ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಆರ್.ಅಶೋಕ್ ಕಳೆದ ವರ್ಷದಿಂದ ರಾಜ್ಯ ಸರ್ಕಾರ ಒಬ್ಬರಿಗೂ ಉದ್ಯೋಗ ನೀಡಿಲ್ಲ. 65 ಸಾವಿರ ಹುದ್ದೆ ಭರ್ತಿಗೆ ಆದೇಶಿಸಿ 6 ತಿಂಗಳು ಆಗಿದೆ. ಸಿಎಂ, ಡಿಸಿಎಂ ಅಧಿಕಾರದ ಕಚ್ಚಾಟದಲ್ಲಿ ಮುಳುಗಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಉದ್ಯೋಗ ಬೇಕಿದೆ. ಸಿಎಂ ಸಿದ್ದರಾಮಯ್ಯಗೆ ಎರಡುವರೆ ವರ್ಷ ಇದ್ದುದ್ದು 5 ವರ್ಷದ ಉದ್ಯೋಗ ಬೇಕು. ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ಆದಾಯ ಬರುವ ಉದ್ಯೋಗ ಬೇಕು ರಾಜ್ಯ ಸರ್ಕಾರ ಪಾಪರ್ ಆಗಿದೆ ಎಂದು ಕಿಡಿಕಾರಿದರು.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಹೈಕಮಾಂಡ್ ಹಂತದಲ್ಲಿ ನಿರ್ಧಾರವಾಗುತ್ತೆ ನಿತಿನ್ ನಬಿನ್, ಪ್ರಧಾನಿ ಮೋದಿ ನೇತೃತ್ವದಲ್ಲಿ ನಿರ್ಧಾರವಾಗುತ್ತೆ ಎಂದರು.
Key words: CM, DCM, job, R. Ashok







