ನಾಳೆ ಸಿಎಂ ಮತ್ತು ಡಿಸಿಎಂ ಅಧಿಕಾರ ಸ್ವೀಕಾರ ಹಿನ್ನೆಲೆ: ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಕೆ.

ಮೈಸೂರು,ಮೇ,19,2023(www.justkannada.in):  ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನ ಗೆಲ್ಲುವ ಮೂಲಕ ಬಹುಮತ  ಪಡೆದು ಅಧಿಕಾರಕ್ಕೇರಲು ಸಜ್ಜಾಗಿದ್ದು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಸಿದ್ದರಾಮಯ್ಯ  ಜೊತೆಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ನಾಳೆ ಅಧಿಕಾರ ಸ್ವೀಕರಿಸುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ವರುಣ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಇಂದು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರದ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ರಂಗಸ್ವಾಮಿ ಹಾಗೂ ಶ್ರೀಕಂಠೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ  ಹೆಜ್ಜಿಗೆ ಇಂದಿನ ಬಾಬು ಅವರ ನೇತೃತ್ವದಲ್ಲಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ತೆರಳಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.  ಸಿಎಂ ಆಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಶ್ರೀಕಂಠಸ್ವಾಮಿ ಹಾಗೂ ತಾಯಿ ಚಾಮುಂಡೇಶ್ವರಿ ದೇವಿಯವರು ಆಯಸ್ಸು  ಆರೋಗ್ಯ ಹಾಗೂ ರಾಜ್ಯ ಸರ್ಕಾರವನ್ನು ಉತ್ತಮವಾಗಿ ನಡೆಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥನೆ ಸಲ್ಲಿಸಿ ಶುಭ ಕೋರಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ,  ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿಯಾಗಿ 5 ವರ್ಷಗಳ ಕಾಲ ಅಧಿಕಾರ ನಡೆಸಿ ಅನುಭವ ಇರುವುದರಿಂದ ಮತ್ತೆ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿ ಅಧಿಕಾರ ನಡೆಸಲಿದ್ದಾರೆ. ಅವರು ರಾಜ್ಯದ ಅಭಿವೃದ್ಧಿ ಕಡೆಗೆ ಹೆಚ್ಚು ಗಮನ ಕೊಡುವ ಮೂಲಕ ಕಾಂಗ್ರೆಸ್ ಪಕ್ಷವು ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ್ದ ಐದು ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ವಿಶ್ವಾಸ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಚಿನ್ನಂಬಳ್ಳಿ ಆರ್ ಮಹದೇವ್, ಸುತ್ತೂರು ಸೋಮಣ್ಣ, ರವಿ ನಗರಲೆ ನಾರಾಯಣಾಯ್ಕ ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ, ಕೆಬಿ ಸ್ವಾಮಿ ಗಿರೀಶ್, ಎಪಿಎಂಸಿ ಮಾಜಿ ಉಪಾಧ್ಯಕ್ಷ ತಗಡೂರು ಆರ್ ಮಹದೇವ್, ಬೊಕ್ಕಹಳ್ಳಿ ಸೋಮಸುಂದರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮಿ ಬಿಪಿ, ಮಹದೇವ್ ಹಾರೋಪುರ, ಶಿವಣ್ಣ ಬೆಳಗಲಿ, ಪುರುಷೋತ್ತಮ್, ಜಗದೀಶ್ ಕುಮಾರ ಕಿರುಗುಂದ ಶಿವ ನಾಗ, ಮಲ್ಲಿಪುರ ಪ್ರಕಾಶ್ ಮಹದೇವಸ್ವಾಮಿ, ಕಲ್ಬಳ್ಳಿ ಸುರೇಶ್ ಬಾಬು, ರಾಂಪುರ ಮುದ್ರಾಮಯ, ತೊರೆಮಾವು ಗಿರೀಶ್ ,ಪರಶಿವ ಸೇರಿ ಹಲವರು ಉಪಸ್ಥಿತರಿದ್ದರು.

Key words: CM – DCM –oath- Taking the oath- power -tomorrow.