ಬೆಂಗಳೂರು,ಜುಲೈ,2,2026 (www.justkannda.in): ರಾಜ್ಯದಲ್ಲಿ ತೀವ್ರ ಬರ ಇದೆ, ನೀರು ವಿದ್ಯುತ್ ಗೆ ಅಭಾವ ಇದೆ. ಹೀಗಾಗಿ ರೈತರು ಮಳೆ ನೀರು ನಂಬಿಕೊಂಡು ಬೆಳೆ ಬೆಳೆಯಬೇಡಿ ಎಂದು ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.
ಇಂದು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ವಿದ್ಯುತ್ ಅಭಾವ ತಪ್ಪಿಸಲು ಪರ್ಯಾಯದತ್ತ ಗಮನಹರಿಸಬೇಕಿದೆ. ಬರಪೀಡಿತ ಪ್ರದೇಶಗಳಿಗೆ ನಾನು ಭೇಟಿ ಕೊಡುತ್ತೇನೆ. ರಾಜ್ಯದ ಜಲಾಶಯಗಳಿಗೆ ಒಳಹರಿವು ಪ್ರಮಾಣ ಕಡಿಮೆ ಇದೆ. ನೀರಿಲ್ಲ ಹೀಗಾಗಿ ರೈತರು ಮಳೆ ನೀರು ನಂಬಿಕೊಂಡು ಬೆಳೆ ಬೆಳೆಯಬೇಡಿ. ಜಲಾಶಯ ತುಂಬುವವರೆಗೆ ರೈತರು ಬೆಳೆ ಬೆಳೆಯಲು ಹೋಗಬೇಡಿ ಎಂದರು.
ಈ ಬಾರಿ ಇಡೀ ದೇಶದಲ್ಲಿಯೇ ಭೀಕರ ಬರಗಾಲ ಇದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಸೂಚನೆ ಕೊಟ್ಟಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. 
ವಿಬಿ ಜಿ ರಾಮ್ ಜಿ ಯೋಜನೆಗೆ 40% ರಾಜ್ಯದಿಂದ ಕೊಡಬೇಕು. ರಾಜ್ಯದಿಂದ ಪ್ರತಿರೋಧವಿದೆ. ಕೋರ್ಟ್ ಗೂ ಅರ್ಜಿ ಸಲ್ಲಿಸಿದ್ದೇವೆ ಆದರೂ ಯೋಜನೆ ಜಾರಿ ಮಾಡಲು ಮುಂದಾಗಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
Key words: Severe drought, Farmers, crops, CM, DK Shivakumar






