ಬೆಂಗಳೂರು, ಆಗಸ್ಟ್,4,2026 (www.justkannada.in): ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಠಿ ಪರಿಸ್ಥಿತಿಯ ಉಂಟಾಗಿರುವ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಜಿಲ್ಲಾವಾರು ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆಗಾರಿಕೆ ನೀಡಿದ್ದಾರೆ.
ತಮಗೆ ವಹಿಸಿರುವ ಜಿಲ್ಲೆಗಳಿಗೆ ತಕ್ಷಣ ಪ್ರವಾಸ ಕೈಗೊಂಡು, ಪ್ರತಿಯೊಂದು ತಾಲೂಕಿನಲ್ಲಿನ ವಾಸ್ತವ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿ ಮಳೆ, ಬೆಳೆ ಹಾನಿ, ಬರದ ಸ್ಥಿತಿ ಸೇರಿದಂತೆ ವಾಸ್ತವಾಂಶಗಳ ವರದಿಯನ್ನು ತಕ್ಷಣ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಪರಮೇಶ್ವರ್ ಅವರಿಗೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಯಾವ ಸಚಿವರಿಗೆ ಯಾವ ಜಿಲ್ಲೆಯ ಜವಾಬ್ದಾರಿ ಇಲ್ಲಿದೆ ಮಾಹಿತಿ..
ಡಾ. ಜಿ. ಪರಮೇಶ್ವರ್ – ತುಮಕೂರು
ಯತೀಂದ್ರ ಸಿದ್ದರಾಮಯ್ಯ – ಮೈಸೂರು
ಚೆಲುವರಾಯಸ್ವಾಮಿ – ಮಂಡ್ಯ
ಪುಟ್ಟರಂಗಶೆಟ್ಟಿ – ಚಾಮರಾಜನಗರ
ಟಿ. ರಘುಮೂರ್ತಿ – ಚಿತ್ರದುರ್ಗ
ಬಿ.ಎಸ್. ಸುರೇಶ್ (ಬೈರತಿ) – ಚಿಕ್ಕಬಳ್ಳಾಪುರ
ಕೆ.ಹೆಚ್. ಮುನಿಯಪ್ಪ- ಬೆಂಗಳೂರು ಗ್ರಾಮಾಂತರ
ರಾಮಲಿಂಗಾರೆಡ್ಡಿ – ಕೋಲಾರ
ಹೆಚ್.ಸಿ. ಬಾಲಕೃಷ್ಣ – ಬೆಂಗಳೂರು ದಕ್ಷಿಣ
ಬಿ.ಜೆ. ಜಮೀರ್ ಅಹ್ಮದ್ ಖಾನ್ – ವಿಜಯನಗರ
ಕೆ.ಜೆ. ಜಾರ್ಜ್ – ಚಿಕ್ಕಮಗಳೂರು
ಕೆ.ಎಂ. ಶಿವಲಿಂಗೇಗೌಡ – ಹಾಸನ
ಮಧು ಬಂಗಾರಪ್ಪ – ಶಿವಮೊಗ್ಗ
ಎಂ.ಬಿ. ಪಾಟೀಲ್ – ವಿಜಯಪುರ, ಬಾಗಲಕೋಟೆ
ವಿಜಯಾನಂದ ಕಾಶಪ್ಪನವರ – ದಾವಣಗೆರೆ
ಎಸ್.ಎಸ್. ಮಲ್ಲಿಕಾರ್ಜುನ- ದಾವಣಗೆರೆ
ರುದ್ರಪ್ಪ ಲಮಾಣಿ – ಹಾವೇರಿ
ಬಸವರಾಜ ರಾಯರೆಡ್ಡಿ – ಗದಗ
ಸತೀಶ್ ಜಾರಕಿಹೊಳಿ – ಬೆಳಗಾವಿ
ಸಂತೋಷ್ ಲಾಡ್- ಧಾರವಾಡ
ಲಕ್ಷ್ಮಣ ಸವದಿ – ಉತ್ತರ ಕನ್ನಡ
ಪ್ರಿಯಾಂಕ್ ಖರ್ಗೆ – ಕಲಬುರಗಿ
ಅಜಯ್ ಧರಂ ಸಿಂಗ್ – ರಾಯಚೂರು
ಈಶ್ವರ್ ಖಂಡ್ರೆ – ಬೀದರ್
ಪಿ.ಎಂ. ನರೇಂದ್ರಸ್ವಾಮಿ – ಕೊಡಗು
ಯು.ಟಿ. ಖಾದರ್ – ದಕ್ಷಿಣ ಕನ್ನಡ, ಉಡುಪಿ
ಬಿ. ನಾಗೇಂದ್ರ – ಬಳ್ಳಾರಿ
ಶರಣ ಪ್ರಕಾಶ ಪಾಟೀಲ್ – ಯಾದಗಿರಿ
ಶಿವರಾಜ್ ಸಂಗಪ್ಪ ತಂಗಡಗಿ- ಕೊಪ್ಪಳ
ಕೃಷ್ಣ ಬೈರೇಗೌಡ – ಬೆಂಗಳೂರು ನಗರ

Key words: CM DK Shivakumar, ministers, responsibility, districts, drought situation







