ಬೆಂಗಳೂರು,ಜೂನ್,9,2026 (www.justkannada.in): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಜಿ ಸಿಎಂಗಳನ್ನ ಭೇಟಿಯಾಗಿ ಚರ್ಚೆ ನಡೆಸಿ ಸಲಹೆ ಪಡೆದಿದ್ದಾರೆ.
ಮಾಜಿ ಸಿಎಂಗಳಾದ ಜಗದೀಶ್ ಶೆಟ್ಟರ್, ಡಿ.ವಿ ಸದಾನಂದಗೌಡ ಅವರನ್ನ ಅವರ ನಿವಾಸದಲ್ಲಿ ಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದು ಈ ವೇಳೆ ಅವರ ಜೊತೆ ಚರ್ಚಿಸಿ ಸಲಹೆ ಪಡೆದಿದ್ದಾರೆ. ಹಾಗೆಯೇ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ನಿವಾಸಕ್ಕೂ ಭೇಟಿ ನೀಡಿದ್ದರು.
ಈ ಮೂಲಕ ಸಿಎಂ ಡಿಕೆ ಶಿವಕುಮಾರ್ ಭಿನ್ನಾಭಿಪ್ರಾಯ ಬದಿಗಿಟ್ಟು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮುನ್ನ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನ ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.
Key words: CM, DK Shivakumar, meet, former CMs






