ಜನರ ಸಮಸ್ಯೆ ಆಲಿಸಲು ಪ್ರಜಾಸೇವೆ ಎಂಬ ಪ್ರತ್ಯೇಕ ಇಲಾಖೆ ಸ್ಥಾಪನೆ- ಸಿಎಂ ಡಿಕೆಶಿ ಘೋಷಣೆ

ಬೆಂಗಳೂರು,ಜೂನ್,20,2026 (www.justkannada.in):  ಜನರ ಸಮಸ್ಯೆ ಆಲಿಸಲು ಪ್ರತ್ಯೇಕ ಇಲಾಖೆಯನ್ನ ಸ್ಥಾಪಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಜನರ ಸಮಸ್ಯೆ ಆಲಿಸಲು ಪ್ರತ್ಯೇಕ ಇಲಾಖೆ ಸ್ಥಾಪನೆ ಮಾಡಲಾಗುತ್ತಿದೆ. ಪ್ರತ್ಯೇಕ  ಪ್ರಜಾಸೇವೆ ಇಲಾಖೆ  ಹೊಸ ಇಲಾಖೆಗೆ ಪ್ರತ್ಯೇಕ ಸಚಿವರು ಐಎಎಸ್ ಅಧಿಕಾರಿಗಳು ಇರುತ್ತಾರೆ. ಖಾಲಿ ನಿವೇಶನಕ್ಕೆ ಒಸಿ, ಸಿಸಿ ಕೊಡಲು ಸಾಧ್ಯವುಲ್ಲ. ಎಂದು ತಿಳಿಸಿದರು.

ರಾಜ್ಯದ ಹಿತಕ್ಕಾಗಿ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ.  ಡೀಸೆಲ್ ದರ ತೀವ್ರವಾಗಿ ಹೆಚ್ಚಳ ಆಗಿದೆ. ಡೀಸೆಲ್ ಏರಿಕೆ ಆಗಿರೋದನ್ನ ನೋಡಿದರೇ ಅದರ ಬಗ್ಗೆ ವರದಿ ಕೊಡುವಂತೆ ಅಧಿಕಾರಿಗಳೀಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Key words: CM, DK Shivakumar, Cabinet meeting,