ಬೆಂಗಳೂರು,ಸೆಪ್ಟಂಬರ್,8,2026 (www.justkannada.in): ಇಂದು ಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಅಲ್ಲಿರುವ ಸಮಸ್ಯೆಗಳನ್ನ ಆಲಿಸಿದರು.
ಎಪಿಎಂಸಿ ಮಾರುಕಟ್ಟೆಯ ಶುಂಠಿ ಮಂಡಿಗೆ ಭೇಟಿ ನೀಡಿದ ಸಿಎಂ ಡಿಕೆ ಶಿವಕುಮಾರ್, ಶುಂಠಿ ಬೆಳೆಗಾರರು ವರ್ತಕರಿಂದ ಮಾಹಿತಿ ಸಂಗ್ರಹಿಸಿದರು. ವ್ಯಾಪಾರಿಗಳಿಗೆ ಯಾವ ರೀತಿ ದರ ನಿಗದಿ ಮಾಡುತ್ತೀರಿ ಎಂದು ಪ್ರಶ್ನಿಸಿ ಮಾಹಿತಿ ಸಂಗ್ರಹಿಸಿದರು.
ಮಾರ್ಕೆಟ್ ಗೆ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಎಪಿಎಂಸಿ ಮಾರುಕಟ್ಟೆಯಲ್ಲಿನ ಸಮಸ್ಯೆಗಳನ್ನ ಆಲಿಸಿದ್ದೇನೆ. ರೈತರು ವರ್ತಕರು ಹಮಾಲಿಗಳ ಜೊತೆ ಮಾತನಾಡಿದ್ದೇನೆ. ಕೂಲಿ ಕಾರ್ಮಿಕರು ವ್ಯಾಪಾರಿಗಳು ಮಹಿಳಾ ವ್ಯಾಪಾರಿಳು ಇಲ್ಲಿ ಕೆಲಸ ಮಾಡುವವರ ಸಮಸ್ಯೆಗಳನ್ನ ಆಲಿಸಿದ್ದೇನೆ ಎಂಪಿಎಂಸಿಯ ಹಲವು ವಿಚಾರ ಖುದ್ದು ಮಾಹಿತಿ ಪಡೆದಿದ್ದೇನೆ ಮಾರುಕಟ್ಟೆಯಲ್ಲಿ ಮೂಲ ಸೌಲಭ್ಯಗಳ ಕೊರತೆ ಬಗ್ಗೆ ಮಾಹಿತಿ ಎಲ್ಲವನ್ನೂ ಪರಿಶೀಲಿಸಿ ಮಾಹಿತಿ ಪಡೆದುಕೊಂಡಿದ್ದೇನೆ. ಸಮಸ್ಯೆಗಳನ್ನು ನಿವಾರಿಸುವ ಕೆಲಸ ಮಾಡುತ್ತೇನೆ ಇಲ್ಲಿ ಚಿಕ್ಕಮಕ್ಕಳು ಕೂಲಿ ಕೆಲಸ ಮಾಡುತ್ತಿರುವುದು ಕಂಡು ಬಂದಿದೆ ಕೂಲಿ ಮಾಡುವುದುನ್ನ ನಿಲ್ಲಿಸಿ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು ಶಾಲೆಗೆ ಮಕ್ಕಳನ್ನು ಕಳುಹಿಸುವ ವ್ಯವಸ್ಥೆ ಆಗಬೇಕು ಎಂದು ತಿಳಿಸಿದರು.
Key words: CM DK Shivakumar, visits, Yeshwantpur, APMC market,






