Saturday, August 1, 2026

BDA Apartments

Home Front Page ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್

ಮೈಸೂರು,ಆಗಸ್ಟ್,1,2026 (www.justkannada.in):  ಸಿಎಂ ಆದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿರುವ ಡಿ.ಕೆ ಶಿವಕುಮಾರ್ ಅವರು ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದರು.

ಇದಕ್ಕೂ ಮುನ್ನ ಡಿ.ಕೆ. ಶಿವಕುಮಾರ್  ಭರ್ಜರಿ ರೋಡ್‌ಶೋ ನಡೆಸಿದರು. ಕಾರಂಜಿ ಕೆರೆಯಿಂದ ಆರಂಭಗೊಂಡ ಈ ಬೃಹತ್ ರೋಡ್‌ಶೋ ಕುರುಬರಹಳ್ಳಿ ಸರ್ಕಲ್‌ವರೆಗೂ ವಿಸ್ತರಿಸಿತ್ತು. ನಂತರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.

ಸಿಎಂ ಡಿಕೆ ಶಿವಕುಮಾರ್ ಅವರಿಗೆ  ಸಂಸದ ಸುನೀಲ್ ಬೋಸ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಅನಿಲ್ ಚಿಕ್ಕಮದು, ರವಿಶಂಕರ್ ಸಾಥ್  ನೀಡಿದರು.

Key words: CM, DK Shivakumar,  visited, Chamundi Hills