ಜಾತಿ ಜನಗಣತಿ ವರದಿ ಬಿಡುಗಡೆ ಬಗ್ಗೆ ಸಿಎಂ ನಿರ್ಧಾರ ಮಾಡಬೇಕು- ಸಚಿವ ಸತೀಶ್ ಜಾರಕಿಹೊಳಿ.

ಬೆಳಗಾವಿ,ಅಕ್ಟೋಬರ್,3,2023(www.justkannada.in):  ಜಾತಿ ಜನಗಣತಿ ವರದಿ ಬಿಡುಗಡೆ ಬಗ್ಗೆ  ಸಿಎಂ ನಿರ್ಧಾರ ಮಾಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಬಿಹಾರ ಸರ್ಕಾರದಿಂದ ಜಾತಿ ಜನಗಣತಿ ವರದಿ ಬಿಡುಗಡೆ ಸ್ವಾಗತಾರ್ಹ. ಸುಮಾರು ವರ್ಷಗಳ ಹಿಂದೆ ಕರ್ನಾಟಕದಲ್ಲೂ ಜಾತಿ ಜನಗಣತಿ ತಯಾರಾಗಿದೆ. ಜಾತಿ ಜನಗಣತಿ ವರದಿ ಬಿಡುಗಡೆ ಬಗ್ಗೆ ಸಿಎಂ ನಿರ್ಧಾರ ಮಾಡಬೇಕು ಎಂದು ಆಗ್ರಹಿಸಿದರು.

ಜಾತಿ ಜನಗಣತಿ ವರದಿ ಜಾರಿ ಮಾಡುವುದು ಒಳ್ಳೆಯದು. ಸಾಮಾಜಿಕ, ಶೈಕ್ಷಣಿಕ ಲೆಕ್ಕಾಚಾರದಲ್ಲಿ ಬಹಳ ಒಳ್ಳೆಯ ಬೆಳವಣಿಗೆ.  ಸರ್ಕಾರ ಜಾತಿ ಜನಗಣತಿ ವರದಿಗೆ 200 ಕೋಟಿ ಖರ್ಷು ಮಾಡಿಬೇಕು.  ಅದಷ್ಟು ಬೇಗ ವರದಿ ಜಾರಿ ಆಗಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಒತ್ತಾಯಿಸಿದರು.

Key words: CM –should- decide – release – caste census report – Minister -Satish Jarakiholi.