ಸುಹಾಸ್ ಹತ್ಯೆ ಕೇಸ್: ಸಂಪೂರ್ಣ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ: ಕಟ್ಟೆಚ್ಚರ ವಹಿಸಲು ಸೂಚನೆ

ಬೆಂಗಳೂರು,ಮೇ,2,2025 (www.justkannada.in):  ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಭೆ  ನಡೆಸಿ ಸಂಪೂರ್ಣ ಮಾಹಿತಿ ಪಡೆದರು.

ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂವರಾವ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಘಟನೆ ಕುರಿತು ಸಂಪೂರ್ಣ ಮಾಹಿತಿ ಪಡೆದರು. ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡೆದಂತೆ ಕಟ್ಟೆಚ್ಚರ ವಹಿಸಲು  ಸೂಚನೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಸಭೆ ಬಳಿಕ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ಡಿಜಿ ಮತ್ತು ಸಿಎಂ ಸಿದ್ದರಾಮಯ್ಯ ಜೊತೆ ಸಭೆ ಮಾಡಿದ್ದೇನೆ ಗೃಹ ಸಚಿವರ ಜೊತೆಗೂ ಮಾತನಾಡಿದ್ದೇನೆ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಯಾಗಿದೆ. ಓಲೈಕೆ ರಾಜಕಾರಣ ಆಗಬಾರದು ಪೊಲೀಸರಿಗೆ ಮುಕ್ತ ಅವಕಾಶ ಕೊಟ್ಟಿದ್ದೇವೆ. ಕಳೆದ ವಾರವೂ ಒಂದು ಹತ್ಯೆಯಾಗಿತ್ತು ಈ ವಾರ ಮತ್ತೊಂದು ಹತ್ಯೆಯಾಗಿ ಯಾರೆ ತಪ್ಪು ಮಾಡಿದ್ರೂ ಕ್ರಮ ಆಗಬೇಕು ಎಂದು ಸಿಎಂ ತಿಳಿಸಿದ್ದಾರೆ. ಮಂಗಳೂರಿಲ್ಲಿ ಶಾಂತಿ ಕಾಪಾಡಬೇಕು. ಬಿಜೆಪಿಯವರು ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು.

Key words: Suhas murder case, CM Siddaramaiah, meeting