Wednesday, August 12, 2026

BDA Apartments

Home Front Page ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆಗೆ ನಿರ್ಧಾರ- ಹೈಕಮಾಂಡ್ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಘೋಷಣೆ

ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆಗೆ ನಿರ್ಧಾರ- ಹೈಕಮಾಂಡ್ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಘೋಷಣೆ

ನವದೆಹಲಿ,ಜೂನ್,9,2025 (www.justkannada.in):  ಜಾತಿ ಗಣತಿ ನಡೆದು 10 ವರ್ಷಗಳೇ ಕಳೆದಿದ್ದು ಈ ಸಂಬಂಧ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ಹೈಕಮಾಂಡ್ ಸೂಚಿಸಿದೆ. ಹೀಗಾಗಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿ ನಡೆಸಿದ್ದಾರೆ.  ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದೆ ಕಾಲ್ತುಳಿತ ಪ್ರಕರಣ ಮತ್ತು ಜಾತಿಗಣತಿ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ.

ಅದರಲ್ಲೂ ಮುಖ್ಯವಾಗಿ ಜಾತಿ ಜನಗಣತಿ ಬಗ್ಗೆ ಚರ್ಚೆ ನಡೆದಿದೆ. ಜಾತಿ ಜನಗಣತಿ ವರದಿ 10 ವರ್ಷದ ಹಳೆಯದಾಗಿರುವ ಕಾರಣ ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ಮಾಡಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಿದ್ದಾರೆ. ಮುಖ್ಯವಾಗಿ ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆ ಆಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಸಮೀಕ್ಷೆ ಮಾಡಲು ಹೇಳಿದ್ದಾರೆ. ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದು ಸ್ಪಷ್ಟಪಡಿಸಿದರು.vtu

Key words: caste census, survey, again, CM Siddaramaiah