ಅತಿ ಹೆಚ್ಚು ಅಶಿಸ್ತು ಇರುವ ಪಕ್ಷ ಬಿಜೆಪಿ -ಸಿಎಂ ಸಿದ್ದರಾಮಯ್ಯ ಟೀಕೆ.

ಬೆಂಗಳೂರು,ಜುಲೈ,3,2023(www.justkannada.in): ವಿಪಕ್ಷ ನಾಯಕರನ್ನ ಆಯ್ಕೆ ಮಾಡಲು ವಿಳಂಬ ಧೋರಣೆ ತೋರುತ್ತಿರುವ ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ , ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ ಅನ್ನೋದು ಸ್ಪಷ್ಟವಾಗಿ ಗೊತ್ತಾಗುತ್ತೆ. ಬಿಜೆಪಿಯವರು ತಮ್ಮ ಪಕ್ಷ ಶಿಸ್ತಿನ ಪಕ್ಷ ಅಂತ ಹೇಳಿಕೊಳ್ಳುತ್ತಾರೆ. ಆದರೆ ಅತಿ ಹೆಚ್ಚು ಅಶಿಸ್ತು ಇರುವ ಪಕ್ಷ ಬಿಜೆಪಿ. ವಿಪಕ್ಷ ನಾಯಕನ ಆಯ್ಕೆ ಮಾಡುವ ವಿಚಾರ ಅವರ ಪಕ್ಷಕ್ಕೆ ಬಿಟ್ಟಿದ್ದು ಎಂದು ಹೇಳಿದರು.

Key words: CM- Siddaramaiah –criticizes- BJP – undisciplined party.