ದಾಸೋಹ ಸಂಸ್ಕಾರದ ಸಿದ್ದರಾಮಯ್ಯ ಅವರು ಸರ್ವರ ಮುಖ್ಯಮಂತ್ರಿ: ಸಚಿವ ಹೆಚ್.ಸಿ.ಮಹದೇವಪ್ಪ

ಮೈಸೂರು ಅಕ್ಟೋಬರ್, 7,2023(www.justkannada.in):  ದಾಸೋಹ ಸಂಸ್ಕಾರದ ಸಿದ್ದರಾಮಯ್ಯ ಅವರು ಸರ್ವರ ಮುಖ್ಯಮಂತ್ರಿ ಎಂದು ಸಮಾಜ ಕಲ್ಯಾಣ ಸಚಿವ  ಹೆಚ್.ಸಿ.ಮಹದೇವಪ್ಪ ನುಡಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಮೈಸೂರಿನ ಬಸವ ಬಳಗಗಳ ಒಕ್ಕೂಟ ಮೈಸೂರು ಕಲಾಮಂದಿರದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶರಣ ಸಂಸ್ಕೃತಿಯನ್ನು ತಮ್ಮ ಬದುಕಿನ ಆಚರಣೆಯನ್ನಾಗಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಬಸವ ಜಯಂತಿಯ ದಿನವನ್ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಯ್ಕೆ ಮಾಡಿಕೊಂಡರು ಎಂದು ಹೇಳಿದರು. .

ಶರಣ ಸಂಸ್ಕೃತಿಯ ಅನುಯಾಯಿಗಳಾದ ಸಿದ್ದರಾಮಯ್ಯ ಅವರು,  ಮುಖ್ಯಮಂತ್ರಿಯಾದ ಬಳಿಕ ಮೊದಲಿಗೆ ಸಹಿ ಹಾಕಿದ್ದು ದಾಸೋಹ ಸಂಸ್ಕೃತಿಯ ಅನ್ನ ಭಾಗ್ಯ ಯೋಜನೆಗೆ. ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋವನ್ನು ಕಡ್ಡಾಯಗೊಳಿಸಿದ್ದು ಸಿದ್ದರಾಮಯ್ಯ ಅವರು. ಹೀಗಾಗಿ ವಚನ ಕ್ರಾಂತಿ ಮತ್ತು ಶರಣ ಸಂಸ್ಕೃತಿಯ ಆಶಯಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದುಕು ಮತ್ತು ಆಚರಣೆಗಳಲ್ಲಿ ಇದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಅವರು ವಿವರಿಸಿದರು.

ಸಿದ್ದರಾಮಯ್ಯ ಅವರು ಬಸವತತ್ವದ ಅಪ್ಪಟ ಅನುಯಾಯಿ. ಸರ್ವರನ್ನೂ ಜತೆಯಾಗಿ ಕೊಂಡೊಯ್ಯುತ್ತಿದ್ದಾರೆ: ಸಚಿವ ಈಶ್ವರ ಖಂಡ್ರೆ

ಸಿದ್ದರಾಮಯ್ಯ ಬಸವತತ್ವದ ಅಪ್ಪಟ ಅನುಯಾಯಿ. ಸರ್ವರನ್ನೂ ಜತೆಯಾಗಿ ಕೊಂಡೊಯ್ಯುತ್ತಿದ್ದಾರೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಎಲ್ಲಾ ಜಾತಿ-ಧರ್ಮ- ಸಮುದಾಯಗಳಿಗೆ ಅಕ್ಷರ ಮತ್ತು ಅನ್ನ ದಾಸೋಹವನ್ನು ನೀಡಿದ್ದು ಲಿಂಗಾಯತ ವೀರಶೈವ ಮಠಗಳು. ಸಿದ್ದರಾಮಯ್ಯ ಅವರು ಜಾರಿಗೆ ತಂದಿರುವ ಕಾರ್ಯಕ್ರಮಗಳು ಕೂಡ ಶರಣರ ಆಶಯದಂತೆ ಎಲ್ಲಾ ಜಾತಿ, ಧರ್ಮಗಳಿಗೂ ಅನ್ವಯವಾಗುತ್ತವೆ ಎಂದು ವಿವರಿಸಿದರು.

Key words: CM Siddaramaiah -Dasoha Sanskar – Minister -HC Mahadevappa-Ishwar khandre