ಮಾರ್ಚ್ 7 ರಂದು ದೆಹಲಿಗೆ  ಸಿಎಂ ಸಿದ್ದರಾಮಯ್ಯ .

ಬೆಂಗಳೂರು,ಮಾರ್ಚ್,5,2024(www.justkannada.in):  ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಮಾರ್ಚ್ 7 ರಂದು ನವದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾರ್ಚ್ 7 ರಂದು ದೆಹಲಿಗೆ ತೆರಳಲಿರುವ  ಸಿಎಂ ಸಿದ್ದರಾಮಯ್ಯ  ಮಾರ್ಚ್  8 ರಂದು ಹೈಕಮಾಂಡ್  ಜೊತೆ ಚರ್ಚೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ಒಂದು ಸುತ್ತಿನ ಸಭೆ ನಡೆಸಿದ್ದಾರೆ.    ರಾಜ್ಯ  ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಜತೆ ನಿನ್ನ ಚರ್ಚೆ ನಡೆಸಿದ್ದಾರೆ. ಅಭ್ಯರ್ಥಿಗಳ  ಪಟ್ಟಿ ಅಂತಿಮಕ್ಕೂ ಮುನ್ನ  ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಸಭೆ ನಡೆಸಿದ್ದಾಗಿ ತಿಳಿಸಿದ್ದಾರೆ.

ನಾವು ಮಾರ್ಚ್ 7 ರಂದು ನಮ್ಮ ಅಂತಿಮ ಕೇಂದ್ರ ಚುನಾವಣಾ ಸಮಿತಿ ಸಭೆಯನ್ನು ನಡೆಸುತ್ತೇವೆ. ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7 ರಂದು ದೆಹಲಿಗೆ ಹೋಗುತ್ತಿದ್ದು, ಅಲ್ಲಿ ನಾವು ಅಭ್ಯರ್ಥಿಗಳ (ಮೊದಲ) ಪಟ್ಟಿಯನ್ನು ಅಂತಿಮಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

Key words: CM -Siddaramaiah – Delhi – March 7.