ಯರಗೋಳ್ ಡ್ಯಾಂ ಲೋಕಾರ್ಪಣೆ ಮಾಡಿದ ಸಿಎಂ ಸಿದ‍್ಧರಾಮಯ್ಯ.

ಕೋಲಾರ,ನವೆಂಬರ್,11,2023(www.justkannada.in):  ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಯರಗೋಳ್ ಗ್ರಾಮದ ಬಳಿ ನಿರ್ಮಾಣ ಮಾಡಲಾಗಿರುವ  ಯರಗೋಳ್ ಡ್ಯಾಂ ಅನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆ ಮಾಡಿದರು.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಯರಗೋಳು ಗ್ರಾಮದ ಬಳಿ ಡ್ಯಾಂ ನಿರ್ಮಾಣ ಮಾಡಲಾಗಿದ್ದು ಕೋಲಾರ,ಬಂಗಾರಪೇಟೆ, ಮಾಲೂರು  ಹಾಗೂ 45 ಗ್ರಾಮಗಳಿಗೆ ಈ ಡ್ಯಾಂ ಕುಡಿಯುವ ನೀರು ಒದಗಿಸಲಿದೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಕೆಹೆಚ್ ಮುನಿಯಪ್ಪ‌, ಬೈರತಿ ಸುರೇಶ್ ಸೇರಿ ಜಿಲ್ಲೆಯ ಶಾಸಕರುಗಳು ಸಾಥ್ ನೀಡಿದರು.

Key words: CM- Siddaramaiah –inaugurated- Yaragol Dam.