Tuesday, September 1, 2026

BDA Apartments

Home Front Page ಪ್ರಗತಿ ಮೊಬೈಲ್ ಅಪ್ಲಿಕೇಶನ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಪ್ರಗತಿ ಮೊಬೈಲ್ ಅಪ್ಲಿಕೇಶನ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜನವರಿ,31,2024(www.justkannada.in):  జిಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ ಪ್ರಗತಿ ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು. 

ಪ್ರಗತಿ ಮೊಬೈಲ್ ಅಪ್ಲಿಕೇಶನ್ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಸಹಾಯ ಮಾಡುತ್ತದೆ ಮತ್ತು ಅಧಿಕಾರಿಗಳು ವೇಳಾಪಟ್ಟಿಯ ಪ್ರಕಾರ ಸಂಸ್ಥೆಗಳಿಗೆ ಭೇಟಿ ನೀಡುವುದರಿಂದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಅಪ್ಲಿಕೇಶನ್ ಅಗತ್ಯತೆಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಹಾಗೂ ಸರಿಯಾದ ಯೋಜನೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಮತ್ತು ನಿಧಿಯ ಪರಿಣಾಮಕಾರಿ ಬಳಕೆಗೆ ಸಹಾಯ ಮಾಡುತ್ತದೆ.

ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಚಾಲನೆ ನೀಡುವ ವೇಳೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪಯ ಮುಖ್ಯ ಕಾರ್ಯದರ್ಶಿ ಅತೀಕ್ ಅಹಮದ್,  ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: CM -Siddaramaiah -launched – Pragati mobile -application.