ನಾಳೆಯಿಂದ ಸಿಎಂ ಸಿದ್ಧರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ: ಕಾರ್ಯಕ್ರಮಗಳ ಪಟ್ಟಿ ಹೀಗಿದೆ..

ಮೈಸೂರು, ಆಗಸ್ಟ್,26,2023(www.justkannada.in): ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 27(ನಾಳೆ) ರಿಂದ ಆಗಸ್ಟ್ 30ರವರೆಗೆ ಮೈಸೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಆಗಸ್ಟ್ 27ರ ರಾತ್ರಿ 8 ಗಂಟೆಗೆ ಮೈಸೂರಿಗೆ ಆಗಮಿಸುವ ಅವರು ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಆಗಸ್ಟ್ 28ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿರುವ ಕೆ .ಡಿ.ಪಿ ಸಭೆಯಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ರಾತ್ರಿ 7 ಗಂಟೆಗೆ ಹೋಟೆಲ್ ಜೆ.ಪಿ.ಪ್ಯಾಲೇಸ್ ನಲ್ಲಿ ಗಂಗೋತ್ರಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಆಗಸ್ಟ್ 29 ರಂದು ಬೆಳಿಗ್ಗೆ10,30ಕ್ಕೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಕಡಕೋಳ ಕೈಗಾರಿಕಾ ಪ್ರದೇಶದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 1,45ಕ್ಕೆ  ಕೆ.ಆರ್.ಆಸ್ಪತ್ರೆಯ ಸುಟ್ಟ ಗಾಯಗಳ ನವೀಕರಣ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಮೈಸೂರು ಚಾಮರಾಜನಗರ ಶಾಸಕರುಗಳನ್ನು ಭೇಟಿ ಮಾಡಿ ಸಂಜೆ 6 ಗಂಟೆಗೆ ವಕೀಲರುಗಳ ಸಂಘದ ಕಛೇರಿಗೆ ಭೇಟಿ ನೀಡುವರು.

ಆಗಸ್ಟ್ 30 ಬುಧವಾರ ಬೆಳಿಗ್ಗೆ 11 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಗೃಹ ಲಕ್ಷ್ಮಿ ಯೋಜನೆಯ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಮಧ್ಯಾಹ್ನ 3.50ಕ್ಕೆ ಸಿದ್ದಲಿಂಗಪುರದ ಕನಕ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Key words: CM Siddaramaiah- Mysore – Tour – programs- list